ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ವಿಜ್ಞಾನಿಗಳಿಗೆ ಪ್ರೇರಣೆ ನೀಡಿ, ಕೋವಿಡ್ ಲಸಿಕೆ ಆವಿಷ್ಕಾರ ಮಾಡಲಾಯಿತು. ಆದರೆ, ಇದರ ವಿರುದ್ಧ ಕಾಂಗ್ರೆಸ್ ವ್ಯಾಪಕ ಅಪಪ್ರಚಾರ ಮಾಡಿತು. ಲಸಿಕೆಯನ್ನು ‘ಬಿಜೆಪಿ ಲಸಿಕೆ’ ಎಂದು ಲೇವಡಿ ಮಾಡಿತು. ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಂತಾದ ನಾಯಕರೆಲ್ಲ ಲಸಿಕೆಯ ಬಗ್ಗೆ ಟೀಕೆ ಮಾಡಿ, ಜನರನ್ನು ನಿರುತ್ತೇಜನಗೊಳಿಸಿದರು. ಇದರಿಂದ ಆರಂಭದಲ್ಲಿ ಜನ ಲಸಿಕೆ ಪಡೆಯಲು ಮುಂದೆ ಬರಲೇ ಇಲ್ಲ. ಇವತ್ತು ಸಂಭವಿಸುತ್ತಿರುವ ಪ್ರಾಣ ಹಾನಿಗಳಿಗೆ ಇದೇ ಕಾರಣ’ ಎಂದು ದೂರಿದರು.