<p><strong>ಮಂಗಳೂರು:</strong> ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ ಸಿಲಿಂಡರ್ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶದಲ್ಲಿ ಅವರು ನೀಡಿದ್ದ ಈ ಭರವಸೆ ಈಡೇರಿಸಿಲ್ಲ’ ಎಂದು ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಹೇಳಿದರು.</p>.<p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಆಮ್ ಆದ್ಮಿ ಪಾರ್ಟಿ (ಎಎಪಿ), ಆಲ್ಇಂಡಿಯಾ ಮಜಿಲಿಸ್ ಇ ಇತ್ಹೇದುಲ್ ಮುಸ್ಲಿಮೀನ್ (ಎಐಎಂಐಎಂ), ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಬಿಜೆಪಿಯ ಬಿ-ಟೀಮ್ಗಳು. ಜೆಡಿಎಸ್ ಕೂಡ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ' ಎಂದರು.</p>.<p>‘ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಚತ್ತೀಸಘಡದ ಚುನಾವಣೆಯಲ್ಲಿ ಪಕ್ಷವು ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಿದೆ. ರಾಜಸ್ಥಾನದಲ್ಲಿ ಎಲ್ಲ ನಾಗರಿಕರಿಗೂ ಆರೋಗ್ಯ ವಿಮೆ ಮಾಡಿಸಿದ್ದು, ₹ 25 ಲಕ್ಷದವರೆಗೆ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ. ಹಿಮಾಚಲ ಪ್ರದೇಶ ಮತ್ತು ಚತ್ತೀಸಘಡದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ ಸಿಲಿಂಡರ್ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶದಲ್ಲಿ ಅವರು ನೀಡಿದ್ದ ಈ ಭರವಸೆ ಈಡೇರಿಸಿಲ್ಲ’ ಎಂದು ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಹೇಳಿದರು.</p>.<p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಆಮ್ ಆದ್ಮಿ ಪಾರ್ಟಿ (ಎಎಪಿ), ಆಲ್ಇಂಡಿಯಾ ಮಜಿಲಿಸ್ ಇ ಇತ್ಹೇದುಲ್ ಮುಸ್ಲಿಮೀನ್ (ಎಐಎಂಐಎಂ), ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಬಿಜೆಪಿಯ ಬಿ-ಟೀಮ್ಗಳು. ಜೆಡಿಎಸ್ ಕೂಡ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ' ಎಂದರು.</p>.<p>‘ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಚತ್ತೀಸಘಡದ ಚುನಾವಣೆಯಲ್ಲಿ ಪಕ್ಷವು ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಿದೆ. ರಾಜಸ್ಥಾನದಲ್ಲಿ ಎಲ್ಲ ನಾಗರಿಕರಿಗೂ ಆರೋಗ್ಯ ವಿಮೆ ಮಾಡಿಸಿದ್ದು, ₹ 25 ಲಕ್ಷದವರೆಗೆ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ. ಹಿಮಾಚಲ ಪ್ರದೇಶ ಮತ್ತು ಚತ್ತೀಸಘಡದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>