ಘಟನೆ ನಡೆದಿರುವ ಸಂಬಂಧ ಮಸೀದಿಯ ಜಂಟಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಪೊಲೀಸ್ ಇಲಾಖೆ ಅವರ ಮೇಲೆ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಿ, ಕಾಂಗ್ರೆಸ್ ಅಣತಿಯಂತೆ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರ್ಕಾರ, ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿವೆ. ಪೊಲೀಸರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು ಜೊತೆಗೆ ಶರಣ್ ಪಂಪ್ವೆಲ್ ಮೇಲೆ ದಾಖಲಿಸಿರುವ ಪ್ರಕರಣ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಹೇಳಿದರು.