ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಎನ್ಐಎ ತನಿಖೆ ಕುರಿತು ಗೊಂದಲದ ಹೇಳಿಕೆ ಬೇಡ ಎಂಬ ಖಾದರ್ ಹೇಳಿಕೆ ಖಂಡನೀಯ. ಕಾಂಗ್ರೆಸ್ನ ಮಾಜಿ ಶಾಸಕರ ಮನೆಯಲ್ಲಿ ನಡೆದ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಘಟಕ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯನ್ನು ಬಿಜೆಪಿ ಸಮರ್ಥಿಸುತ್ತದೆ. ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇವೆಲ್ಲದರ ವಿರುದ್ಧ ಹೋರಾಟ ಮಾಡುತ್ತ ಬರಲಾಗಿದೆ’ ಎಂದರು.