ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಾರಗೆ ಟಿಕೆಟ್ ನಿರಾಕರಣೆ: ಬಿಜೆಪಿ ಉಪಾಧ್ಯಕ್ಷ ವೆಂಕಟ್‌ ವಳಲಂಬೆ ರಾಜೀನಾಮೆ

Last Updated 12 ಏಪ್ರಿಲ್ 2023, 7:07 IST
ಅಕ್ಷರ ಗಾತ್ರ

ಸುಳ್ಯ: ‘ಪ್ರಾಮಾಣಿಕ ಕಾರ್ಯಕರ್ತರೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಮನಸ್ಸಿಗೆ ನೋವಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ವೆಂಕಟ ವಳಲಂಬೆ ತಿಳಿಸಿದ್ದಾರೆ.

‘ಸಾಮಾನ್ಯ ಮನೆತನದಿಂದ ಬಂದಿರುವ ಅಂಗಾರ ತಮ್ಮ ಸರಳ ಸಜ್ಜನಿಕೆಯಿಂದ ಜನಮನ ಗೆದ್ದಿದ್ದವು. ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಪಕ್ಷದ ನಡೆಯಿಂದ ಬೇಸರವಾಗಿದ್ದು, ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರಿಗೆ ಸಲ್ಲಿಸಿದ್ದೇನೆ’ ಎಂದು ವೆಂಕಟ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT