ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಮಾನಾಥ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರು ತಮ್ಮ ವೋಟ್ ಬ್ಯಾಂಕ್ ಅನ್ನು ಗಮನದಲ್ಲಿರಿಸಿಕೊಂಡು ಆಯ್ದ ಜನರಿಗೆ ಮಾತ್ರ ಕಿಟ್ ವಿತರಣೆ ಮಾಡಿದ್ದಾರೆ. ಆದರೆ, ಬಿಜೆಪಿ ಯಾವುದೇ ಜಾತಿ, ಧರ್ಮ ನೋಡದೇ, ಅರ್ಹರಿಗೆ ಕಿಟ್ ವಿತರಿಸಿದೆ. ಯು.ಟಿ. ಖಾದರ್ ಅವರು ಪ್ರತಿನಿಧಿಸುವ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 25 ಸಾವಿರ ಕುಟುಂಬಗಳಿಗೂ ಬಿಜೆಪಿ ವತಿಯಿಂದ ಕಿಟ್ ನೀಡಲಾಗಿದೆ ಎಂದರು.