ಮೂಡುಬಿದಿರೆ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ. ಪ್ರಯಾಣಿಸುತ್ತಿದ್ದ ಇನೋವಾ ಕಾರು ಇಲ್ಲಿಗೆ ಸಮೀಪದ ತೋಡಾರಿನಲ್ಲಿ ಬುಧವಾರ ಉರುಳಿ ಬಿದ್ದಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ತೋಡಾರು ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ರಸ್ತೆ ಬದಿ ಉರುಳಿ ಬಿದ್ದಿದೆ.
ಕಾರಿನಲ್ಲಿದ್ದ ಸುದರ್ಶನ್ ಎಂ. ಮತ್ತು ಕಾರು ಚಾಲಕ ಜಯ ಅಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆಯಿಂದ ಅವರು ಮಂಗಳೂರಿನಲ್ಲಿರುವ ಪಕ್ಷದ ಜಿಲ್ಲಾ ಕಚೇರಿಗೆ ತೆರಳುತ್ತಿದ್ದರು. ಇಬ್ಬರೂ ಸೀಟು ಬೆಲ್ಟ್ ಧರಿಸಿದರಿಂದ ಜೀವಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.