<p><strong>ಮಂಗಳೂರು:</strong> ಬಹುದಿನಗಳಿಂದ ಚರ್ಚಿಸಲಾಗುತ್ತಿದ್ದ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸುದರ್ಶನ ಮೂಡುಬಿದಿರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ರಾಜ್ಯ ಚುನಾವಣಾ ಉಸ್ತುವಾರಿ ನಿರ್ಮಲ್ಕುಮಾರ್ ಸುರಾನಾ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೆ.ಉದಯ ಕುಮಾರ್ ಶೆಟ್ಟಿ ಚುನಾವಣೆ ನಡೆಸಿಕೊಟ್ಟರು.</p>.<p>ಈವರೆಗೆ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಶಾಸಕ ಸಂಜೀವ ಮಠಂದೂರು, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಚುನಾವಣಾ ವೀಕ್ಷಕರು, ಪಕ್ಷದ ಎಂಟು ಮಂಡಲಗಳ ಅಧ್ಯಕ್ಷರು, ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಭಾಗಿಯಾಗಿದ್ದರು.</p>.<p>ಹಾಲಿ ಅಧ್ಯಕ್ಷ ಸಂಜೀವ ಮಠಂದೂರು ಅವರ ಅವಧಿ ಸೆಪ್ಟೆಂಬರ್ಗೆ ಅಂತ್ಯಗೊಂಡಿದ್ದು, ವಿವಿಧ ಕಾರಣಗಳಿಂದ ನೂತನ ಅಧ್ಯಕ್ಷರ ಆಯ್ಕೆ ನನೆಗುದಿಗೆ ಬಿದ್ದಿತ್ತು. ಮಠಂದೂರು ಅಧ್ಯಕ್ಷತೆಯಲ್ಲಿ ವಿಧಾನಸಭೆ, ಲೋಕಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆ ಎದುರಿಸಿದ್ದ ಬಿಜೆಪಿ, ಭರ್ಜರಿ ಜಯಗಳಿಸಿತ್ತು.</p>.<p>ನೂತನ ಅಧ್ಯಕ್ಷ ಸುದರ್ಶನ್ ಅವರನ್ನು ಅಭಿನಂದಿಸಿರುವ ಶಾಸಕ ವೇದವ್ಯಾಸ ಕಾಮತ್, ‘ನಿಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ’ ಎಂದು ಹಾರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬಹುದಿನಗಳಿಂದ ಚರ್ಚಿಸಲಾಗುತ್ತಿದ್ದ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸುದರ್ಶನ ಮೂಡುಬಿದಿರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ರಾಜ್ಯ ಚುನಾವಣಾ ಉಸ್ತುವಾರಿ ನಿರ್ಮಲ್ಕುಮಾರ್ ಸುರಾನಾ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೆ.ಉದಯ ಕುಮಾರ್ ಶೆಟ್ಟಿ ಚುನಾವಣೆ ನಡೆಸಿಕೊಟ್ಟರು.</p>.<p>ಈವರೆಗೆ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಶಾಸಕ ಸಂಜೀವ ಮಠಂದೂರು, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಚುನಾವಣಾ ವೀಕ್ಷಕರು, ಪಕ್ಷದ ಎಂಟು ಮಂಡಲಗಳ ಅಧ್ಯಕ್ಷರು, ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಭಾಗಿಯಾಗಿದ್ದರು.</p>.<p>ಹಾಲಿ ಅಧ್ಯಕ್ಷ ಸಂಜೀವ ಮಠಂದೂರು ಅವರ ಅವಧಿ ಸೆಪ್ಟೆಂಬರ್ಗೆ ಅಂತ್ಯಗೊಂಡಿದ್ದು, ವಿವಿಧ ಕಾರಣಗಳಿಂದ ನೂತನ ಅಧ್ಯಕ್ಷರ ಆಯ್ಕೆ ನನೆಗುದಿಗೆ ಬಿದ್ದಿತ್ತು. ಮಠಂದೂರು ಅಧ್ಯಕ್ಷತೆಯಲ್ಲಿ ವಿಧಾನಸಭೆ, ಲೋಕಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆ ಎದುರಿಸಿದ್ದ ಬಿಜೆಪಿ, ಭರ್ಜರಿ ಜಯಗಳಿಸಿತ್ತು.</p>.<p>ನೂತನ ಅಧ್ಯಕ್ಷ ಸುದರ್ಶನ್ ಅವರನ್ನು ಅಭಿನಂದಿಸಿರುವ ಶಾಸಕ ವೇದವ್ಯಾಸ ಕಾಮತ್, ‘ನಿಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ’ ಎಂದು ಹಾರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>