‘ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ ಯಡಿಯೂರಪ್ಪ ಅವರನ್ನು ಹೀಗೆ ಅವಮಾನಕರವಾಗಿ ಹೊರದಬ್ಬುವ ಕೆಲಸವನ್ನು ನಾಡಿನ ಲಿಂಗಾಯತ ಸಮುದಾಯದವರು ಹೇಗೆ ಸಹಿಸಿಕೊಳ್ಳುತ್ತಾರೋ ಗೊತ್ತಿಲ್ಲ. ಲಿಂಗಾಯತ ಸಮುದಾಯ ಈಗಲಾದರೂ ಆರ್ಎಸ್ಎಸ್ ತಂತ್ರಗಾರಿಕೆಯನ್ನು ಅರ್ಥೈಸಿಕೊಂಡರೆ ಒಳ್ಳೆಯದು. ಕರ್ನಾಟಕದಲ್ಲಿ ಉತ್ತರ ಪ್ರದೇಶ ಬಿಜೆಪಿ ಮಾದರಿಯ ಕೋಮುವಾದ ಮತ್ತು ಫ್ಯಾಸಿಸ್ಟ್ ಆಡಳಿತವನ್ನು ತರಲು ಬಿಜೆಪಿ ಹೈಕಮಾಂಡ್ ಹೊರಟಿದೆ. ಅದಕ್ಕೆ ಯಡಿಯೂರಪ್ಪ ಅವರಿಗೆ ಗೇಟ್ ಪಾಸ್ ಕೊಡಲು ನಿರ್ಧರಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.