ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ನಮ್ಮನ್ನು ಬೆಳೆಸಿದ ಪಕ್ಷ, ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರು ನಮಗೆ ಮಾರ್ಗದರ್ಶನ ಮಾಡಿ, ನಮ್ಮ ಕೆಲಸಗಳಿಗೆ ಪ್ರೇರಣೆ ನೀಡಿ, ಸಾಮಾನ್ಯ ಕಾರ್ಯಕರ್ತರಿಗೆ ದೊಡ್ಡ ಜವಾಬ್ದಾರಿ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಮತ್ತು ನನ್ನಂಥವರು, ಹಿರಿಯರು, ಹೈಕಮಾಂಡ್, ರಾಜ್ಯ ಘಟಕದ ಅಧ್ಯಕ್ಷರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ’ ಎಂದರು.