ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಆಂತರಿಕ ಸ್ಪರ್ಧೆ ನಡೆಯುತ್ತಿದೆ. ಅದರ ಮುಂದುವರಿದ ಭಾಗವೇ ಮೇಕೆದಾಟು ಪಾದಯಾತ್ರೆಯ ನಾಟಕ. ಇದು ಕಾಂಗ್ರೆಸ್ನ ಹೋರಾಟವಲ್ಲ, ಬದಲಾಗಿ ಶಿವಕುಮಾರ್ ಅವರ ಹೋರಾಟ. ಕಾಂಗ್ರೆಸ್ನವರಿಗೆ ಈ ಯೋಜನೆಯ ಬಗ್ಗೆ ನೈಜ ಕಾಳಜಿ ಇದ್ದರೆ ಅವರ ಸರ್ಕಾರ ಇದ್ದಾಗ ಮಾಡಬೇಕಿತ್ತು’ ಎಂದು ತಿಳಿಸಿದರು.