ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂಡುಶೆಡ್ಡೆ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ರಾಜಕೀಯ ಒತ್ತಡಕ್ಕೊಳಗಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿರಸ್ಕರಿಸಿದ್ದಾರೆ. ಚುನಾವಣಾಧಿಕಾರಿಯ ಎದುರೇ ಕಾಂಗ್ರೆಸ್ ಅಭ್ಯರ್ಥಿ ಸಹಿ ಹಾಕಿದ ನಾಮಪತ್ರವನ್ನು, ಪರಿಶೀಲನೆ ವೇಳೆ ಸಹಿ ಹಾಕಿದ ಜಾಗ ಸರಿ ಇಲ್ಲ ಎಂದು ಅದೇ ಚುನಾವಣಾಧಿಕಾರಿ ತಿರಸ್ಕರಿಸಿದ್ದರ ಹಿಂದೆ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ ಒತ್ತಡವಿದೆ’ ಎಂದು ಆರೋಪಿಸಿದರು.