<p><strong>ಮಂಗಳೂರು:</strong> ‘ಹಿಂದೂಗಳನ್ನು ಕೆಟ್ಟವರೆಂದು ಬಿಂಬಿಸಲು ಸಂಸತ್ತಿನಲ್ಲಿ ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾನೆ. ಪಾರ್ಲಿಮೆಂಟ್ ಒಳಗೆ ಹೋಗಿ ಯಾರಾದರೂ ಆತನ ಕೆನ್ನೆಗೆ ಎರಡು ಬಾರಿಸಿದರೆ ಒಳ್ಳೆಯದಿತ್ತು. ಅವನಿಗೆ ಎರಡು ಕೊಟ್ಟರೆ ಸರಿಯಾಗುತ್ತಿತ್ತು’ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.</p>.<p>ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಕಾವೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. </p>.<p>‘ಕಾಂಗ್ರೆಸ್ನ ಹಿಂದೂಗಳು ರಾಜಕೀಯ ಮಾಡಲಿ. ಆದರೆ, ಇಂತಹ ಮಾತುಗಳನ್ನು ಆಡುವವರಿಗೆ ಪ್ರೋತ್ಸಾಹ ಕೊಡಬಾರದು’ ಎಂದರು. </p>.<p>‘ಶಸ್ತ್ರ ಹೇಗೆ ಉಪಯೋಗಿಸಬೇಕು ಎಂದು ಹಿಂದೂ ಸಮಾಜ ತಿಳಿದುಕೊಂಡಿದೆ. ನಾವು ಮಲಗುವುದು ಜಾಸ್ತಿ. ನಿದ್ದೆಯಲ್ಲಿರುವವರನ್ನು ಎಚ್ಚರಿಸುವ ಕೆಲಸವನ್ನು ಬಹುಶಃ ರಾಹುಲ್ ಗಾಂಧಿ ಮಾಡುತ್ತಿದ್ದಾನೆ’ ಎಂದರು. </p>.<p>ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಹಿಂದೂಗಳನ್ನು ಕೆಟ್ಟವರೆಂದು ಬಿಂಬಿಸಲು ಸಂಸತ್ತಿನಲ್ಲಿ ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾನೆ. ಪಾರ್ಲಿಮೆಂಟ್ ಒಳಗೆ ಹೋಗಿ ಯಾರಾದರೂ ಆತನ ಕೆನ್ನೆಗೆ ಎರಡು ಬಾರಿಸಿದರೆ ಒಳ್ಳೆಯದಿತ್ತು. ಅವನಿಗೆ ಎರಡು ಕೊಟ್ಟರೆ ಸರಿಯಾಗುತ್ತಿತ್ತು’ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.</p>.<p>ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಕಾವೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. </p>.<p>‘ಕಾಂಗ್ರೆಸ್ನ ಹಿಂದೂಗಳು ರಾಜಕೀಯ ಮಾಡಲಿ. ಆದರೆ, ಇಂತಹ ಮಾತುಗಳನ್ನು ಆಡುವವರಿಗೆ ಪ್ರೋತ್ಸಾಹ ಕೊಡಬಾರದು’ ಎಂದರು. </p>.<p>‘ಶಸ್ತ್ರ ಹೇಗೆ ಉಪಯೋಗಿಸಬೇಕು ಎಂದು ಹಿಂದೂ ಸಮಾಜ ತಿಳಿದುಕೊಂಡಿದೆ. ನಾವು ಮಲಗುವುದು ಜಾಸ್ತಿ. ನಿದ್ದೆಯಲ್ಲಿರುವವರನ್ನು ಎಚ್ಚರಿಸುವ ಕೆಲಸವನ್ನು ಬಹುಶಃ ರಾಹುಲ್ ಗಾಂಧಿ ಮಾಡುತ್ತಿದ್ದಾನೆ’ ಎಂದರು. </p>.<p>ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>