<p>ಮಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ಮಾತನಾಡಿ, ‘ಜನರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಲೂಟಿ ಸರ್ಕಾರವಾಗಿ ಮಾರ್ಪಟ್ಟಿದೆ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು.</p>.<p>ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ವಾಲ್ಮೀಕಿ ನಿಗಮದ ₹187 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಇಷ್ಟು ದೊಡ್ಡ ಹಗರಣ ನಡೆದರೂ ಮುಖ್ಯಮಂತ್ರಿ ಏನು ಆಗದವರಂತೆ ವರ್ತಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಒಂದರ ಹಿಂದೊಂದು ಭ್ರಷ್ಟಾಚಾರದ ಪ್ರಕರಣ ಅಂಟಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಸಮರ್ಪಕವಾಗಿ ಪಾವತಿಯಾಗುತ್ತಿಲ್ಲ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಗೆ ಅನುದಾನ ಸಿಗುತ್ತಿಲ್ಲ. ಜನವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಜನ ಬೆಂಬಲ ಕಳೆದುಕೊಂಡಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ದೂರಿದರು.</p>.<p>ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ‘ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬೇನಾಮಿ ಹೆಸರಿಗೆ ವರ್ಗಾಯಿಸಲಾಗಿದೆ. ಸಿದ್ದರಾಮಯ್ಯ ಅವರು ತಾಕತ್ತಿದ್ದರೆ ವಕ್ಫ್ಬೋರ್ಡ್ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಣ ವರ್ಗಾಯಿಸಿ ತೋರಿಸಲಿ’ ಎಂದು ಸವಾಲು ಹಾಕಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಮತ್ತಿತರರು ಇದ್ದರು.</p>.<p>ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಹೇಳುತ್ತ ಬಿಜೆಪಿ ಕಾರ್ಯಕರ್ತರು ಕ್ಲಾಕ್ ಟವರ್ ಎದುರಿನಿಂದ ಹೊರಟಾಗ ಪೊಲೀಸರು ಬ್ಯಾರಿಕೇಡ್ ಇಟ್ಟು ಅವರನ್ನು ತಡೆಯಲು ಯತ್ನಿಸಿದರು. ಬ್ಯಾರಿಕೇಡ್ ತಳ್ಳಿ ಮುನ್ನುಗ್ಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಮಹಿಳೆಯರನ್ನು ವಶಕ್ಕೆ ಪಡೆಯುವ ವೇಳೆ ಸೀರೆ ಎಳೆಯಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿ, ಪೂರ್ಣಿಮಾ ಮತ್ತಿತರರು ರಸ್ತೆಯ ನಡುವೆ ಧರಣಿ ಕುಳಿತರು. ಹಿರಿಯ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದ ಮೇಲೆ ಧರಣಿಯಿಂದ ಹಿಂದಕ್ಕೆ ಸರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ಮಾತನಾಡಿ, ‘ಜನರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಲೂಟಿ ಸರ್ಕಾರವಾಗಿ ಮಾರ್ಪಟ್ಟಿದೆ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು.</p>.<p>ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ವಾಲ್ಮೀಕಿ ನಿಗಮದ ₹187 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಇಷ್ಟು ದೊಡ್ಡ ಹಗರಣ ನಡೆದರೂ ಮುಖ್ಯಮಂತ್ರಿ ಏನು ಆಗದವರಂತೆ ವರ್ತಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಒಂದರ ಹಿಂದೊಂದು ಭ್ರಷ್ಟಾಚಾರದ ಪ್ರಕರಣ ಅಂಟಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಸಮರ್ಪಕವಾಗಿ ಪಾವತಿಯಾಗುತ್ತಿಲ್ಲ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಗೆ ಅನುದಾನ ಸಿಗುತ್ತಿಲ್ಲ. ಜನವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಜನ ಬೆಂಬಲ ಕಳೆದುಕೊಂಡಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ದೂರಿದರು.</p>.<p>ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ‘ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬೇನಾಮಿ ಹೆಸರಿಗೆ ವರ್ಗಾಯಿಸಲಾಗಿದೆ. ಸಿದ್ದರಾಮಯ್ಯ ಅವರು ತಾಕತ್ತಿದ್ದರೆ ವಕ್ಫ್ಬೋರ್ಡ್ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಣ ವರ್ಗಾಯಿಸಿ ತೋರಿಸಲಿ’ ಎಂದು ಸವಾಲು ಹಾಕಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಮತ್ತಿತರರು ಇದ್ದರು.</p>.<p>ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಹೇಳುತ್ತ ಬಿಜೆಪಿ ಕಾರ್ಯಕರ್ತರು ಕ್ಲಾಕ್ ಟವರ್ ಎದುರಿನಿಂದ ಹೊರಟಾಗ ಪೊಲೀಸರು ಬ್ಯಾರಿಕೇಡ್ ಇಟ್ಟು ಅವರನ್ನು ತಡೆಯಲು ಯತ್ನಿಸಿದರು. ಬ್ಯಾರಿಕೇಡ್ ತಳ್ಳಿ ಮುನ್ನುಗ್ಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಮಹಿಳೆಯರನ್ನು ವಶಕ್ಕೆ ಪಡೆಯುವ ವೇಳೆ ಸೀರೆ ಎಳೆಯಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿ, ಪೂರ್ಣಿಮಾ ಮತ್ತಿತರರು ರಸ್ತೆಯ ನಡುವೆ ಧರಣಿ ಕುಳಿತರು. ಹಿರಿಯ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದ ಮೇಲೆ ಧರಣಿಯಿಂದ ಹಿಂದಕ್ಕೆ ಸರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>