ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ದೇವಸ್ಥಾನ, ಕಾಲೇಜು, ಶಾಪಿಂಗ್ ಮಾಲ್ ಮತ್ತಿತರ ಜನದಟ್ಟಣೆ ಇರುವ ಸ್ಥಳಗಳಲ್ಲಿ ಸಂಕಲ್ಪ ಪೆಟ್ಟಿಗೆ ಇಡಲಾಗುತ್ತದೆ. ಈ ಪೆಟ್ಟಿಗೆಯು ಒಂದು ವಾರ ಇರಲಿದ್ದು, ಜನರು ತಮ್ಮ ಅಭಿಪ್ರಾಯ ಬರೆದು ಇದರಲ್ಲಿ ಹಾಕಬಹುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಈ ಹಿಂದಿನ ಚುನಾವಣೆಯ ಪ್ರಣಾಳಿಕೆಗಳಲ್ಲಿ ನೀಡಿದ್ದ ಶೇ 95ರಷ್ಟು ಭರವಸೆಗಳನ್ನು ಈಡೇರಿಸಿದೆ. ಈ ಬಾರಿ ಜನರ ಅಭಿಪ್ರಾಯ ಸಂಗ್ರಹಿಸಿ, ಅವುಗಳನ್ನು ಕ್ರೋಡೀಕರಿಸಿ ದೇಶ ಮಟ್ಟದಲ್ಲಿ ಪ್ರಣಾಳಿಕೆ ಸಿದ್ಧವಾಗುತ್ತದೆ ಎಂದು ಹೇಳಿದರು.