ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯದರ್ಶಿ ಪೂಜಾ ಪೈ ಅವರು ‘ಪಾಲಿಕೆಯ ವಾರ್ಡ್ನಲ್ಲಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗದ ಪ್ರತಿಭಾ ಕುಳಾಯಿ, ಜಿಲ್ಲೆಗೆ ₹ 20 ಸಾವಿರ ಕೋಟಿ ಮೊತ್ತದ ಅನುದಾನ ತಂದಿರುವ ಸಂಸದರನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಇದು ಅವರು ಪ್ರತಿನಿಧಿಸುತ್ತಿರುವ ಪಕ್ಷದ ಕೀಳುಮಟ್ಟದ ರಾಜಕೀಯವನ್ನು ಬಿಂಬಿಸುತ್ತದೆ. ಇಂಥ ಪ್ರವೃತ್ತಿಯನ್ನು ಆ ಪಕ್ಷ ಮತ್ತು ಪ್ರತಿಭಾ ಅವರು ನಿಲ್ಲಿಸಬೇಕು’ ಎಂದರು.