ಮಂಗಳೂರು: ವಿಧಾನ ಪರಿಷತ್ ಸದಸ್ಯ ಬಸವನಗೌಡ ಪಾಟೀಲ ಯತ್ನಾಳ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರಿನಿಂದ ನಗರಕ್ಕೆ ಬುಧವಾರ ಜೊತೆಯಾಗಿ ಬಂದಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸವನಗೌಡ ಪಾಟೀಲ ಯತ್ನಾಳ್ ಬಳಿಕ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಯತ್ನಾಳ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ಶಿಸ್ತು ಸಮಿತಿಗೆ ಶಿಫಾರಸು ಆಗಿತ್ತು. ಹೀಗಾಗಿ, ಅವರು ಅಧ್ಯಕ್ಷರ ಜೊತೆ ಬಂದಿರುವುದು ಕುತೂಹಲ ಮೂಡಿಸಿದೆ.