ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಲಸಿಕೆ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಈಗ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ಕಾರಣ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಬೇಕಾಗಿದೆ. ಈ ಬೆಳವಣಿಗೆ ಯಾವುದೇ ಪಕ್ಷ ಆಡಳಿತದಲ್ಲಿದ್ದರೂ ನಡೆದುಕೊಂಡು ಬಂದಿದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿಯಿಂದ ಕೇಂದ್ರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.