ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ’ ಎಂದರು.