ಬೊಳುವಾರಿನಲ್ಲಿ ಬಿಜೆಪಿ ಮುಖಂಡರಾದ ಮುಗೆರೋಡಿ ಬಾಲಕೃಷ್ಣ ರೈ ಮತ್ತು ವೈದ್ಯ ಡಾ.ಎಂ.ಕೆ.ಪ್ರಸಾದ್ ಅವರು ಶಾಸಕ ಸಂಜೀವ ಮಠಂದೂರು ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಗಾಂಧೀಕಟ್ಟೆಯಲ್ಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕದ ಬಳಿಗೆ ಬಂದು, ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮುಖಂಡರಾದ ವಕೀಲ ಪ್ರಸಾದ್, ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಬೂಡಿಯಾರ್ ರಾಧಾಕೃಷ್ಣ ರೈ, ಕೆ.ಜೀವಂಧರ್ ಜೈನ್, ವಿದ್ಯಾ ಗೌರಿ, ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್, ರಾಜೇಶ್ ಬನ್ನೂರು, ಮೀನಾಕ್ಷಿ ಶಾಂತಿಗೋಡು, ನನ್ಯ ಅಚ್ಚುತ ಮೂಡೆತ್ತಾಯ, ಕೃಷ್ಣಪ್ರಸನ್ನ, ಆರ್.ಸಿ.ನಾರಾಯಣ, ನಿತೀಶ್ ಕುಮಾರ್ ಶಾಂತಿವನ, ಪುರುಷೋತ್ತಮ ಮುಂಗ್ಲಿಮನೆ, ಚಂದ್ರಶೇಖರ್ ರಾವ್ ಬಪ್ಪಳಿಗೆ, ಸುರೇಶ್ ಆಳ್ವ ಸಾಂತ್ಯ, ಜಯಶ್ರೀ ಶೆಟ್ಟಿ, ಗೌರಿ ಬನ್ನೂರು, ರಾಮದಾಸ್ ಹಾರಾಡಿ ಇದ್ದರು.