ಬದಿಯಡ್ಕ: ‘ಬಿಜೆಪಿಯಿಂದ ಮಾತ್ರ ಕೇರಳದ ಸಮಗ್ರ ಅಭಿವೃದ್ಧಿ ಸಾಧ್ಯ. ಕೇರಳಿಗರೂ ಕೇಂದ್ರ ಸರ್ಕಾರದ ಫಲಾನುಭವಿಗಳಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರದಿಂದ ಭಾರತೀಯರು ಜಗತ್ತಿನಲ್ಲೇ ಹೆಮ್ಮೆ ಪಡುವಂತಾಗಿದೆ’ ಎಂದು ಬಿಜೆಪಿ ಕೇರಳ ರಾಜ್ಯ ಘಟಕದ ವಕ್ತಾರ ಸಂದೀಪ್ ವಾರಿಯರ್ ಹೇಳಿದರು.
ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಪೆರ್ಲದಲ್ಲಿಕ ನಡೆದ ಬಿಜೆಪಿ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.
ಎಣ್ಮಕಜೆ ಗ್ರಾಮ ಪಂಚಾಯಿತಿ ಬಿಜೆಪಿ ಸಮಿತಿ ಅಧ್ಯಕ್ಷ ಎ.ಸಿ.ಸುಮಿತ್ ರಾಜ್ ಅಧ್ಯಕ್ಷತೆ ವಹಿಸಿದ್ದರು.