<p><strong>ಮಂಗಳೂರು: </strong>ಬಿಜೆಪಿ ಮೀನುಗಾರರ ಹಿತರಕ್ಷಣೆಗೆ ಬದ್ಧವಾಗಿದ್ದು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.</p>.<p>ನಗರದ ಕೆನರಾ ಹೈಸ್ಕೂಲ್ನಲ್ಲಿ ಗುರುವಾರ ಆಯೋಜಿಸಿದ್ದ ಮೀನುಗಾರರ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದರು.</p>.<p>ಈ ಬಾರಿಯ ಬಜೆಟ್ನಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಲಾಗಿದೆ. ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಆರಂಭಿಕವಾಗಿ ₹500 ಕೋಟಿ ಅನುದಾನವನ್ನು ಸಚಿವಾಲಯಕ್ಕೆ ನೀಡಲಾಗಿದೆ. ಬರುವ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಸಚಿವಾಲಯ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.</p>.<p>ಸಮಾಜದಲ್ಲಿ ಕೆಳಹಂತದಲ್ಲಿರುವ ಪ್ರತಿಯೊಬ್ಬ ನಾಗರಿಕನ ಅಭಿವೃದ್ಧಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಯಯೋಜನೆ ರೂಪಿಸಿದೆ. ಎಲ್ಲ ಕ್ಷೇತ್ರದ ಜನರ ಅಭಿವೃದ್ಧಿಯೇ ನಮ್ಮ ಗುರಿ ಎಂಬುದನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದರು.</p>.<p>ಮೀನುಗಾರ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ‘ಓಷಿಯನ್ ಸ್ಮಾರ್ಟ್’ ಯೋಜನೆ ಆರಂಭಿಸಿದೆ. ಇದರಡಿ ಆಧುನಿಕ ತಂತ್ರಜ್ಞಾನ ಬಳಸಿ, ಸಮುದ್ರದಲ್ಲಿ ಇರುವ ಮೀನಿನ ಪ್ರಮಾಣದ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಯೋಜನೆಯಿಂದ ಸುಮಾರು 5 ಲಕ್ಷ ಮೀನುಗಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.</p>.<p>ಯುಪಿಎ ಸರ್ಕಾರ ಕೈಗೆತ್ತಿಕೊಳ್ಳದ ಹಾಗೂ ನನೆಗುದಿಗೆ ಬಿದ್ದಿದ್ದ ಎಲ್ಲ ಯೋಜನೆಗಳನ್ನು ಎನ್ಡಿಎ ಸರ್ಕಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿದ್ಯುತ್ ಸಂಪರ್ಕ ಇಲ್ಲದ 18,600 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 9.70 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರ್ಕಾರದ 453 ಯೋಜನೆಗಳ ಫಲಾನುಭವಿಗಳಿಗೆ ₹6.07 ಲಕ್ಷ ಕೋಟಿ ಸಹಾಯಧನವನ್ನು ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಮಧ್ಯವರ್ತಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಎಂದು ವಿವರಿಸಿದರು.</p>.<p>ಕೃಷಿಕರಿಗೆ ನೀಡುವ ಆದ್ಯತೆಯನ್ನು ಮೀನುಗಾರರಿಗೂ ನೀಡಬೇಕು, ಮೀನು ಸಾಗಣೆ ವಾಹನಗಳಿಗೆ ವಿಧಿಸಲಾಗುತ್ತಿರುವ ಶುಲ್ಕ ರದ್ದುಪಡಿಸಬೇಕು. ಸಾಂಪ್ರದಾಯಿಕ ನಾಡದೋಣಿಗಳಿಗೆ ನೀಡಲಾಗುತ್ತಿರುವ ಸೀಮೆಎಣ್ಣೆ ಪ್ರಮಾಣವನ್ನು ಹೆಚ್ಚಿಸುವಂತೆ ಮೀನುಗಾರ ಸಂಘದ ಪ್ರತಿನಿಧಿಗಳು ಮನವಿ ಮಾಡಿದರು.</p>.<p>ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಸೌಲಭ್ಯಗಳನ್ನು ಒದಗಿಸಬೇಕು. ಮೀನುಗಾರಿಕೆ ಬಂದರುಗಳ ನಿರ್ವಹಣೆಯನ್ನು ಮೀನುಗಾರರಿಗೆ ನೀಡಬೇಕು. ಮೀನುಗಾರ ಸಮುದಾಯದವರು ಒಗ್ಗಟ್ಟಾಗಿದ್ದು, ಸೌಲಭ್ಯಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ಉಳ್ಳಾಲ ನಗರಸಭೆ ಅಧ್ಯಕ್ಷ ಬಾಬು ಬಂಗೇರ, ಬಿಜೆಪಿ ಮುಖಂಡರಾದ ರಾಮಚಂದ್ರ ಬೈಕಂಪಾಡಿ, ನಿತಿನ್ಕುಮಾರ್, ಪ್ರತಾಪ್ ಸಿಂಹ ನಾಯಕ್, ಗೋಪಾಲಕೃಷ್ಣ ಹೇರಳೆ, ಶೋಭೇಂದ್ರ ಸಸಿಹಿತ್ಲು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಬಿಜೆಪಿ ಮೀನುಗಾರರ ಹಿತರಕ್ಷಣೆಗೆ ಬದ್ಧವಾಗಿದ್ದು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.</p>.<p>ನಗರದ ಕೆನರಾ ಹೈಸ್ಕೂಲ್ನಲ್ಲಿ ಗುರುವಾರ ಆಯೋಜಿಸಿದ್ದ ಮೀನುಗಾರರ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದರು.</p>.<p>ಈ ಬಾರಿಯ ಬಜೆಟ್ನಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಲಾಗಿದೆ. ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಆರಂಭಿಕವಾಗಿ ₹500 ಕೋಟಿ ಅನುದಾನವನ್ನು ಸಚಿವಾಲಯಕ್ಕೆ ನೀಡಲಾಗಿದೆ. ಬರುವ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಸಚಿವಾಲಯ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.</p>.<p>ಸಮಾಜದಲ್ಲಿ ಕೆಳಹಂತದಲ್ಲಿರುವ ಪ್ರತಿಯೊಬ್ಬ ನಾಗರಿಕನ ಅಭಿವೃದ್ಧಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಯಯೋಜನೆ ರೂಪಿಸಿದೆ. ಎಲ್ಲ ಕ್ಷೇತ್ರದ ಜನರ ಅಭಿವೃದ್ಧಿಯೇ ನಮ್ಮ ಗುರಿ ಎಂಬುದನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದರು.</p>.<p>ಮೀನುಗಾರ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ‘ಓಷಿಯನ್ ಸ್ಮಾರ್ಟ್’ ಯೋಜನೆ ಆರಂಭಿಸಿದೆ. ಇದರಡಿ ಆಧುನಿಕ ತಂತ್ರಜ್ಞಾನ ಬಳಸಿ, ಸಮುದ್ರದಲ್ಲಿ ಇರುವ ಮೀನಿನ ಪ್ರಮಾಣದ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಯೋಜನೆಯಿಂದ ಸುಮಾರು 5 ಲಕ್ಷ ಮೀನುಗಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.</p>.<p>ಯುಪಿಎ ಸರ್ಕಾರ ಕೈಗೆತ್ತಿಕೊಳ್ಳದ ಹಾಗೂ ನನೆಗುದಿಗೆ ಬಿದ್ದಿದ್ದ ಎಲ್ಲ ಯೋಜನೆಗಳನ್ನು ಎನ್ಡಿಎ ಸರ್ಕಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿದ್ಯುತ್ ಸಂಪರ್ಕ ಇಲ್ಲದ 18,600 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 9.70 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರ್ಕಾರದ 453 ಯೋಜನೆಗಳ ಫಲಾನುಭವಿಗಳಿಗೆ ₹6.07 ಲಕ್ಷ ಕೋಟಿ ಸಹಾಯಧನವನ್ನು ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಮಧ್ಯವರ್ತಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಎಂದು ವಿವರಿಸಿದರು.</p>.<p>ಕೃಷಿಕರಿಗೆ ನೀಡುವ ಆದ್ಯತೆಯನ್ನು ಮೀನುಗಾರರಿಗೂ ನೀಡಬೇಕು, ಮೀನು ಸಾಗಣೆ ವಾಹನಗಳಿಗೆ ವಿಧಿಸಲಾಗುತ್ತಿರುವ ಶುಲ್ಕ ರದ್ದುಪಡಿಸಬೇಕು. ಸಾಂಪ್ರದಾಯಿಕ ನಾಡದೋಣಿಗಳಿಗೆ ನೀಡಲಾಗುತ್ತಿರುವ ಸೀಮೆಎಣ್ಣೆ ಪ್ರಮಾಣವನ್ನು ಹೆಚ್ಚಿಸುವಂತೆ ಮೀನುಗಾರ ಸಂಘದ ಪ್ರತಿನಿಧಿಗಳು ಮನವಿ ಮಾಡಿದರು.</p>.<p>ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಸೌಲಭ್ಯಗಳನ್ನು ಒದಗಿಸಬೇಕು. ಮೀನುಗಾರಿಕೆ ಬಂದರುಗಳ ನಿರ್ವಹಣೆಯನ್ನು ಮೀನುಗಾರರಿಗೆ ನೀಡಬೇಕು. ಮೀನುಗಾರ ಸಮುದಾಯದವರು ಒಗ್ಗಟ್ಟಾಗಿದ್ದು, ಸೌಲಭ್ಯಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ಉಳ್ಳಾಲ ನಗರಸಭೆ ಅಧ್ಯಕ್ಷ ಬಾಬು ಬಂಗೇರ, ಬಿಜೆಪಿ ಮುಖಂಡರಾದ ರಾಮಚಂದ್ರ ಬೈಕಂಪಾಡಿ, ನಿತಿನ್ಕುಮಾರ್, ಪ್ರತಾಪ್ ಸಿಂಹ ನಾಯಕ್, ಗೋಪಾಲಕೃಷ್ಣ ಹೇರಳೆ, ಶೋಭೇಂದ್ರ ಸಸಿಹಿತ್ಲು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>