ತಣ್ಣೀರುಬಾವಿ ಬಳಿಯ ಕಸಬಾ ಬೇಂಗ್ರೆಯ ಕೂಳೂರಿನ ಕುದುರೆಮುಖ ಜಂಕ್ಷನ್ ಬಳಿ ಗೋಣಿ ಚೀಲ ಹಿಡಿದುಕೊಂಡಿದ್ದ ಆರೋಪಿಗಳು, ಪೊಲೀಸ್ ಜೀಪು ಕಂಡೊಡನೆ ಪರಾರಿಯಾಗಲು ಯತ್ನಿಸಿದ್ದರು. ಆದರೆ, ಅವರನ್ನು ಹಿಡಿದು ಗೋಣಿಚೀಲ ಪರಿಶೀಲಿಸಿದಾಗ ಅಕ್ಕಿಯೊಳಗೆ ಕೃಷ್ಣಮೃಗದ ಚರ್ಮ ಇಟ್ಟಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.