<p><strong>ಉಪ್ಪಿನಂಗಡಿ:</strong> ನಿರಂತರ ಮಳೆ, ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ನಿರ್ಮಿಸಿರುವ ಅಣೆಕಟ್ಟೆಯ ಎಲ್ಲ ಗೇಟ್ ತೆರವಿಗೆ ತೊಡಕಾಗಿದೆ.</p>.<p>ಮೇ ಅಂತ್ಯದವರೆಗೆ ಅಣೆಕಟ್ಟೆಗಳಲ್ಲಿ ಹಿನ್ನೀರು ಉಳಿಸಿಕೊಳ್ಳುವುದು ನಿಯಮವಾಗಿದ್ದರೂ ಈ ಬಾರಿ ಅವಧಿಗಿಂತ ಮೊದಲೇ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದರಿಂದ ಮೇ 21ರಿಂದ ಗೇಟ್ ತೆರವು ಕಾಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆದರೆ, ಆ ವೇಳೆ ಚಂಡಮಾರುತದಿಂದ ಭಾರಿ ಮಳೆಯಾಗಿದ್ದರಿಂದ ನೇತ್ರಾವತಿ ನದಿ ಮೈ ತುಂಬಿ ಹರಿಯುವಂತಾಗಿದೆ. ಇದರಿಂದಾಗಿ ಪೂರ್ಣ ಪ್ರಮಾಣದಲ್ಲಿ ಗೇಟ್ ತೆರವು ಅಸಾಧ್ಯವಾಗಿದ್ದು, ನದಿಯಲ್ಲಿ ನೀರಿನ ಪ್ರವಾಹದ ಒತ್ತಡವನ್ನು ಎದುರಿಸಿ ತೆರವು ಕಾರ್ಯಾಚರಣೆ ಮುಂದುವರಿದಿದೆ.</p>.<p>ಭಾರಿ ಪ್ರಮಾಣದ ಕಸಕಡ್ಡಿ, ಮರದ ದಿಮ್ಮಿ ನದಿ ನೀರಿನೊಂದಿಗೆ ಹರಿದು ಬರುತ್ತಿದ್ದು, ಬಿಳಿಯೂರು ಅಣೆಕಟ್ಟೆಯ ಗೇಟ್ಗಳಲ್ಲಿ ಸಿಲುಕಿಕೊಂಡಿದೆ. ಇದೇ ರೀತಿ ಮಳೆ ಸುರಿದರೆ ಅಣೆಕಟ್ಟೆಯ ಮೇಲ್ಭಾಗದ ಪ್ರದೇಶವಾದ ಉಪ್ಪಿನಂಗಡಿಯಲ್ಲಿ ನೆರೆ ಬಾಧಿಸುವ ಸಾಧ್ಯತೆ ಅಧಿಕವಾಗಿದೆ ಎಂಬ ಆತಂಕ ಸ್ಥಳೀಯರಲ್ಲಿದೆ.</p>.<p><strong>15 ಗೇಟ್ ತೆರವು: ಸಹಾಯಕ ಎಂಜಿನಿಯರ್</strong></p><p> ನೇತ್ರಾವತಿ ನದಿಯಲ್ಲಿನ ಕೆಳ ಭಾಗದ ಅಣೆಕಟ್ಟೆಗಳ ಗೇಟ್ ತೆರವುಗೊಳಿಸದೆ ಬಿಳಿಯೂರು ಅಣೆಕಟ್ಟೆಯ ಗೇಟ್ ತೆರವು ನಡೆಸುವುದು ಅಸಾಧ್ಯವಾಗಿತ್ತು. ಈ ಮಧ್ಯೆ ಮೇ ತಿಂಗಳ ನಾಲ್ಕನೇ ವಾರದಲ್ಲಿ ಬಿಳಿಯೂರು ಅಣೆಕಟ್ಟೆಯ ಗೇಟ್ ತೆರವಿಗೆ ಮುಂದಾಗುವಷ್ಟರಲ್ಲಿ ಭಾರಿ ಮಳೆ ಆರಂಭವಾಗಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಆದರೂ 42 ಗೇಟುಗಳ ಪೈಕಿ 15 ಗೇಟ್ ತೆರವುಗೊಳಿಸುವ ಪ್ರಕ್ರಿಯೆ ನಡೆದಿದ್ದು, 9 ಗೇಟ್ಗಳನ್ನು ಪೂರ್ಣವಾಗಿ ತೆರವು ಮಾಡಲಾಗಿದೆ. ಉಳಿದ ಗೇಟ್ಗಳನ್ನು ನೀರಿನ ಪ್ರವಾಹದ ವೇಗ ಕಡಿಮೆ ಆದ ತಕ್ಷಣ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಸಹಾಯಕ ಎಂಜಿನಿಯರ್ ಶಿವಪ್ರಸನ್ನ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ನಿರಂತರ ಮಳೆ, ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ನಿರ್ಮಿಸಿರುವ ಅಣೆಕಟ್ಟೆಯ ಎಲ್ಲ ಗೇಟ್ ತೆರವಿಗೆ ತೊಡಕಾಗಿದೆ.</p>.<p>ಮೇ ಅಂತ್ಯದವರೆಗೆ ಅಣೆಕಟ್ಟೆಗಳಲ್ಲಿ ಹಿನ್ನೀರು ಉಳಿಸಿಕೊಳ್ಳುವುದು ನಿಯಮವಾಗಿದ್ದರೂ ಈ ಬಾರಿ ಅವಧಿಗಿಂತ ಮೊದಲೇ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದರಿಂದ ಮೇ 21ರಿಂದ ಗೇಟ್ ತೆರವು ಕಾಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆದರೆ, ಆ ವೇಳೆ ಚಂಡಮಾರುತದಿಂದ ಭಾರಿ ಮಳೆಯಾಗಿದ್ದರಿಂದ ನೇತ್ರಾವತಿ ನದಿ ಮೈ ತುಂಬಿ ಹರಿಯುವಂತಾಗಿದೆ. ಇದರಿಂದಾಗಿ ಪೂರ್ಣ ಪ್ರಮಾಣದಲ್ಲಿ ಗೇಟ್ ತೆರವು ಅಸಾಧ್ಯವಾಗಿದ್ದು, ನದಿಯಲ್ಲಿ ನೀರಿನ ಪ್ರವಾಹದ ಒತ್ತಡವನ್ನು ಎದುರಿಸಿ ತೆರವು ಕಾರ್ಯಾಚರಣೆ ಮುಂದುವರಿದಿದೆ.</p>.<p>ಭಾರಿ ಪ್ರಮಾಣದ ಕಸಕಡ್ಡಿ, ಮರದ ದಿಮ್ಮಿ ನದಿ ನೀರಿನೊಂದಿಗೆ ಹರಿದು ಬರುತ್ತಿದ್ದು, ಬಿಳಿಯೂರು ಅಣೆಕಟ್ಟೆಯ ಗೇಟ್ಗಳಲ್ಲಿ ಸಿಲುಕಿಕೊಂಡಿದೆ. ಇದೇ ರೀತಿ ಮಳೆ ಸುರಿದರೆ ಅಣೆಕಟ್ಟೆಯ ಮೇಲ್ಭಾಗದ ಪ್ರದೇಶವಾದ ಉಪ್ಪಿನಂಗಡಿಯಲ್ಲಿ ನೆರೆ ಬಾಧಿಸುವ ಸಾಧ್ಯತೆ ಅಧಿಕವಾಗಿದೆ ಎಂಬ ಆತಂಕ ಸ್ಥಳೀಯರಲ್ಲಿದೆ.</p>.<p><strong>15 ಗೇಟ್ ತೆರವು: ಸಹಾಯಕ ಎಂಜಿನಿಯರ್</strong></p><p> ನೇತ್ರಾವತಿ ನದಿಯಲ್ಲಿನ ಕೆಳ ಭಾಗದ ಅಣೆಕಟ್ಟೆಗಳ ಗೇಟ್ ತೆರವುಗೊಳಿಸದೆ ಬಿಳಿಯೂರು ಅಣೆಕಟ್ಟೆಯ ಗೇಟ್ ತೆರವು ನಡೆಸುವುದು ಅಸಾಧ್ಯವಾಗಿತ್ತು. ಈ ಮಧ್ಯೆ ಮೇ ತಿಂಗಳ ನಾಲ್ಕನೇ ವಾರದಲ್ಲಿ ಬಿಳಿಯೂರು ಅಣೆಕಟ್ಟೆಯ ಗೇಟ್ ತೆರವಿಗೆ ಮುಂದಾಗುವಷ್ಟರಲ್ಲಿ ಭಾರಿ ಮಳೆ ಆರಂಭವಾಗಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಆದರೂ 42 ಗೇಟುಗಳ ಪೈಕಿ 15 ಗೇಟ್ ತೆರವುಗೊಳಿಸುವ ಪ್ರಕ್ರಿಯೆ ನಡೆದಿದ್ದು, 9 ಗೇಟ್ಗಳನ್ನು ಪೂರ್ಣವಾಗಿ ತೆರವು ಮಾಡಲಾಗಿದೆ. ಉಳಿದ ಗೇಟ್ಗಳನ್ನು ನೀರಿನ ಪ್ರವಾಹದ ವೇಗ ಕಡಿಮೆ ಆದ ತಕ್ಷಣ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಸಹಾಯಕ ಎಂಜಿನಿಯರ್ ಶಿವಪ್ರಸನ್ನ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>