<p>ಉಳ್ಳಾಲ: ‘ಮಂಗಳೂರಿನ ಬ್ಲಡ್ ಡೋನರ್ಸ್ ವತಿಯಿಂದ 300ನೇ ರಕ್ತದಾನ ಶಿಬಿರ ಇದೇ 20ರಂದು ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲಿನ ಎಸ್. ಕೆ. ಸಭಾಭವನದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ದಿಕ್ ಮಂಜೇಶ್ವರ ಹೇಳಿದರು.</p>.<p>ಸಂಘಟನೆಯ ಸದಸ್ಯರ ಸಾಂಘಿಕ ಪ್ರಯತ್ನದಿಂದ 299 ರಕ್ತದಾನ ಶಿಬಿರ ಆಯೋಜಿಸಿ, ದಾನಿಗಳಿಂದ 29 ಸಾವಿರ ಯೂನಿಟ್ ರಕ್ತ ಸಂಗ್ರಹಿಸಿ ಅರ್ಹ ಫಲಾನುಭವಿಗಳಿಗೆ ಪೂರೈಸಿದ ಸಂಸ್ಥೆ ನಮ್ಮದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಂಸ್ಥೆಯು ಶಿಬಿರವನ್ನು ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸದೆ ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಮಾತ್ರವಲ್ಲದೆ ಕೊಲ್ಲಿ ರಾಷ್ಟ್ರಗಳಾದ ಯುಎಇ, ಸೌದಿ ಅರೇಬಿಯಾ, ಬಹರೈನ್, ಒಮನ್ನಲ್ಲಿಯೂ ಆಯೋಜಿಸಿ, ಸೂಕ್ತ ಸಮಯದಲ್ಲಿ ರೋಗಿಗಳಿಗೆ ರಕ್ತ ಪೂರೈಸಲಾಗುತ್ತಿದೆ’ ಎಂದರು.</p>.<p>‘ಸಂಘಟನೆಯು ರಕ್ತದಾನಕ್ಕೆ ಮಹತ್ವ ಕೊಡುವುದರ ಜೊತೆಗೆ ಜೊತೆಗೆ ‘ಸೂರಿಲ್ಲದವರಿಗೆ ಸೂರು’ ಎಂಬ ಯೋಜನೆಯಡಿಯಲ್ಲಿ ಮುಡಿಪು ಪರಿಸರದ ಒಂದು ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ಬೈತುನ್ನಾರ್ ಎಂಬ ಶೀರ್ಷಿಕೆಯಡಿಯಲ್ಲಿ ಮನೆಯನ್ನು ನಿರ್ಮಿಸಿಕೊಟ್ಟಿದೆ’ ಎಂದರು.</p>.<p>ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ‘ಮಂಗಳೂರಿನ ಬ್ಲಡ್ ಡೋನರ್ಸ್ ವತಿಯಿಂದ 300ನೇ ರಕ್ತದಾನ ಶಿಬಿರ ಇದೇ 20ರಂದು ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲಿನ ಎಸ್. ಕೆ. ಸಭಾಭವನದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ದಿಕ್ ಮಂಜೇಶ್ವರ ಹೇಳಿದರು.</p>.<p>ಸಂಘಟನೆಯ ಸದಸ್ಯರ ಸಾಂಘಿಕ ಪ್ರಯತ್ನದಿಂದ 299 ರಕ್ತದಾನ ಶಿಬಿರ ಆಯೋಜಿಸಿ, ದಾನಿಗಳಿಂದ 29 ಸಾವಿರ ಯೂನಿಟ್ ರಕ್ತ ಸಂಗ್ರಹಿಸಿ ಅರ್ಹ ಫಲಾನುಭವಿಗಳಿಗೆ ಪೂರೈಸಿದ ಸಂಸ್ಥೆ ನಮ್ಮದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಂಸ್ಥೆಯು ಶಿಬಿರವನ್ನು ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸದೆ ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಮಾತ್ರವಲ್ಲದೆ ಕೊಲ್ಲಿ ರಾಷ್ಟ್ರಗಳಾದ ಯುಎಇ, ಸೌದಿ ಅರೇಬಿಯಾ, ಬಹರೈನ್, ಒಮನ್ನಲ್ಲಿಯೂ ಆಯೋಜಿಸಿ, ಸೂಕ್ತ ಸಮಯದಲ್ಲಿ ರೋಗಿಗಳಿಗೆ ರಕ್ತ ಪೂರೈಸಲಾಗುತ್ತಿದೆ’ ಎಂದರು.</p>.<p>‘ಸಂಘಟನೆಯು ರಕ್ತದಾನಕ್ಕೆ ಮಹತ್ವ ಕೊಡುವುದರ ಜೊತೆಗೆ ಜೊತೆಗೆ ‘ಸೂರಿಲ್ಲದವರಿಗೆ ಸೂರು’ ಎಂಬ ಯೋಜನೆಯಡಿಯಲ್ಲಿ ಮುಡಿಪು ಪರಿಸರದ ಒಂದು ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ಬೈತುನ್ನಾರ್ ಎಂಬ ಶೀರ್ಷಿಕೆಯಡಿಯಲ್ಲಿ ಮನೆಯನ್ನು ನಿರ್ಮಿಸಿಕೊಟ್ಟಿದೆ’ ಎಂದರು.</p>.<p>ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>