<p><strong>ಪುತ್ತೂರು:</strong> ಶಾಲಾ ವಠಾರದಲ್ಲಿ ನಿರ್ಮಿಸಿರುವ ಸಿಮೆಂಟ್ ಟ್ಯಾಂಕ್ನಲ್ಲಿ ತುಂಬಿಸಿಟ್ಟಿದ್ದ ನೀರು ನೀಲಿ ಬಣ್ಣವಾದ, ಈ ನೀರು ಬಳಕೆ ಮಾಡಿದ ವಿದ್ಯಾರ್ಥಿಗಳ ಮೈ–ಕೈಯಲ್ಲಿ ತುರಿಕೆ ಕಾಣಿಸಿಕೊಂಡ ಘಟನೆಯೊಂದು ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.</p>.<p>ಈ ಟ್ಯಾಂಕ್ನ ನೀರನ್ನು ಶಾಲೆ ಮಕ್ಕಳು ಕೈ–ಕಾಲು ತೊಳೆಯಲು, ಶೌಚಾಲಯಕ್ಕೆ ಬಳಸುತ್ತಿದ್ದರು. ಬುಧವಾರ ಬೆಳಿಗ್ಗೆ ನಳ್ಳಿಯಲ್ಲಿ ನೀಲಿ ಬಣ್ಣದ ನೀರು ಬರಲಾರಂಭಿಸಿದೆ. ಈ ವಿಚಾರವನ್ನು ಶಿಕ್ಷಕರ ಗಮನಕ್ಕೆ ತಂದಿದ್ದರು. ಶಿಕ್ಷಕರು ಪರಿಶೀಲಿಸಿದಾಗ ಟ್ಯಾಂಕ್ನ ನೀರೂ ನೀಲಿ ಬಣ್ಣವಾಗಿತ್ತು. ಈ ನೀರನ್ನು ಬಳಸಿದಿ ವಿದ್ಯಾರ್ಥಿಗಳಿಗೆ ಕೆಲ ಹೊತ್ತಿನ ಬಳಿಕ ತುರಿಕೆ ಬರಲಾರಂಭಿಸಿತ್ತು ಎಂದು ತಿಳಿದು ಬಂದಿದೆ.</p>.<p>ಎಸ್ಡಿಎಂಸಿ ಅಧ್ಯಕ್ಷ ಗಣೇಶ್ ಮುಂಡೋವುಮೂಲೆ, ಒಳಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಸದಸ್ಯ ಮಹೇಶ್ ರೈ ಕೇರಿ, ಆರೋಗ್ಯ ಇಲಾಖೆಯ ಸಿಎಚ್ಒ ವಿದ್ಯಾಶ್ರೀ, ಆಶಾ ಕಾರ್ಯಕರ್ತೆ ಸರೋಜಿನಿ ಪರಿಶೀಲನೆ ನಡೆಸಿದರು.</p>.<p>ಟ್ಯಾಂಕ್ನ ನೀರನ್ನು ಮಂಗಳವಾರ ಖಾಲಿ ಮಾಡಿ ಸ್ವಚ್ಛಗೊಳಿಸಿ ಕೊಳವೆ ಬಾವಿಯಿಂದ ನೀರು ತುಂಬಿಸಲಾಗಿತ್ತು. ಟ್ಯಾಂಕ್ನ ನೀರನ್ನು ಆರೋಗ್ಯ ಇಲಾಖೆಯವರು ಸಂಗ್ರಹಿಸಿ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಟ್ಯಾಂಕ್ಗೆ ಕಿಡಿಗೇಡಿಗಳು ರಾಸಾಯನಿಕ ವಸ್ತು ಹಾಕಿರಬಹುದೇ, ಅಥವಾ ಸಹಜವಾಗಿ ನೀಲಿ ಬಣ್ಣವಾಗಿರಬಹುದೇ ಎಂಬ ಅನುಮಾನ ಬಂದಿವೆ.</p>.<p>ಘಟನೆ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೆವು. ಆರೋಗ್ಯ ಇಲಾಖೆಯ ಸಿಎಚ್ಒ ಸ್ಥಳಕ್ಕೆ ಬಂದು ಈ ನೀರನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ಕೊಂಡೊಯ್ದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಚಿತ್ರಾ ರೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಶಾಲಾ ವಠಾರದಲ್ಲಿ ನಿರ್ಮಿಸಿರುವ ಸಿಮೆಂಟ್ ಟ್ಯಾಂಕ್ನಲ್ಲಿ ತುಂಬಿಸಿಟ್ಟಿದ್ದ ನೀರು ನೀಲಿ ಬಣ್ಣವಾದ, ಈ ನೀರು ಬಳಕೆ ಮಾಡಿದ ವಿದ್ಯಾರ್ಥಿಗಳ ಮೈ–ಕೈಯಲ್ಲಿ ತುರಿಕೆ ಕಾಣಿಸಿಕೊಂಡ ಘಟನೆಯೊಂದು ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.</p>.<p>ಈ ಟ್ಯಾಂಕ್ನ ನೀರನ್ನು ಶಾಲೆ ಮಕ್ಕಳು ಕೈ–ಕಾಲು ತೊಳೆಯಲು, ಶೌಚಾಲಯಕ್ಕೆ ಬಳಸುತ್ತಿದ್ದರು. ಬುಧವಾರ ಬೆಳಿಗ್ಗೆ ನಳ್ಳಿಯಲ್ಲಿ ನೀಲಿ ಬಣ್ಣದ ನೀರು ಬರಲಾರಂಭಿಸಿದೆ. ಈ ವಿಚಾರವನ್ನು ಶಿಕ್ಷಕರ ಗಮನಕ್ಕೆ ತಂದಿದ್ದರು. ಶಿಕ್ಷಕರು ಪರಿಶೀಲಿಸಿದಾಗ ಟ್ಯಾಂಕ್ನ ನೀರೂ ನೀಲಿ ಬಣ್ಣವಾಗಿತ್ತು. ಈ ನೀರನ್ನು ಬಳಸಿದಿ ವಿದ್ಯಾರ್ಥಿಗಳಿಗೆ ಕೆಲ ಹೊತ್ತಿನ ಬಳಿಕ ತುರಿಕೆ ಬರಲಾರಂಭಿಸಿತ್ತು ಎಂದು ತಿಳಿದು ಬಂದಿದೆ.</p>.<p>ಎಸ್ಡಿಎಂಸಿ ಅಧ್ಯಕ್ಷ ಗಣೇಶ್ ಮುಂಡೋವುಮೂಲೆ, ಒಳಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಸದಸ್ಯ ಮಹೇಶ್ ರೈ ಕೇರಿ, ಆರೋಗ್ಯ ಇಲಾಖೆಯ ಸಿಎಚ್ಒ ವಿದ್ಯಾಶ್ರೀ, ಆಶಾ ಕಾರ್ಯಕರ್ತೆ ಸರೋಜಿನಿ ಪರಿಶೀಲನೆ ನಡೆಸಿದರು.</p>.<p>ಟ್ಯಾಂಕ್ನ ನೀರನ್ನು ಮಂಗಳವಾರ ಖಾಲಿ ಮಾಡಿ ಸ್ವಚ್ಛಗೊಳಿಸಿ ಕೊಳವೆ ಬಾವಿಯಿಂದ ನೀರು ತುಂಬಿಸಲಾಗಿತ್ತು. ಟ್ಯಾಂಕ್ನ ನೀರನ್ನು ಆರೋಗ್ಯ ಇಲಾಖೆಯವರು ಸಂಗ್ರಹಿಸಿ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಟ್ಯಾಂಕ್ಗೆ ಕಿಡಿಗೇಡಿಗಳು ರಾಸಾಯನಿಕ ವಸ್ತು ಹಾಕಿರಬಹುದೇ, ಅಥವಾ ಸಹಜವಾಗಿ ನೀಲಿ ಬಣ್ಣವಾಗಿರಬಹುದೇ ಎಂಬ ಅನುಮಾನ ಬಂದಿವೆ.</p>.<p>ಘಟನೆ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೆವು. ಆರೋಗ್ಯ ಇಲಾಖೆಯ ಸಿಎಚ್ಒ ಸ್ಥಳಕ್ಕೆ ಬಂದು ಈ ನೀರನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ಕೊಂಡೊಯ್ದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಚಿತ್ರಾ ರೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>