ದೋಣಿ ದುರಂತ: ಇಬ್ಬರ ಮೃತದೇಹ ಪತ್ತೆ; ಉಳಿದ ನಾಲ್ವರಿಗೆ ಮುಂದುವರಿದ ಶೋಧ ಕಾರ್ಯ

ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳಸಮುದ್ರದಲ್ಲಿ ಮಗುಚಿಬಿದ್ದಿದ್ದು ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೇಲಕ್ಕೆತ್ತಿದ್ದಾರೆ.
ಮೃತರನ್ನು ಬೊಕ್ಕಪಟ್ನ ನಿವಾಸಿಗಳಾದ ಪಾಂಡುರಂಗ ಸುವರ್ಣ ಹಾಗೂ ಪ್ರೀತಂ (58) ಎಂದು ಗುರುತಿಸಲಾಗಿದೆ. ಝಿಯಾವುಲ್ಲ(32), ಅನ್ಸಾರ್ (31), ಹಸೈನಾರ್ (25), ಚಿಂತನ್ (21) ಇನ್ನೂ ಪತ್ತೆಯಾಗಿಲ್ಲ.
ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಸ್ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ. 14 ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತ ದೇಹ ಲಭಿಸಿದೆ. ಇನ್ನುಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಲಿದೆ.
ಮೀನಿನ ಸಂಗ್ರಹ ಅಧಿಕವಾಗಿದ್ದರಿಂದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.