ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್ ಇರಿಸಿದ್ದ ಆರೋಪಿ ಮಂಗಳೂರು ಪೊಲೀಸರಿಗೆ ಹಸ್ತಾಂತರ: ಡಿಸಿಪಿ ಚೇತನ್‌ಸಿಂಗ್

Last Updated 22 ಜನವರಿ 2020, 5:50 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆ ಮಧ್ಯೆ ಶರಣಾಗಿದ್ದಾನೆ ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿದರು.

ಶರಣಾದ ವ್ಯಕ್ತಿಯನ್ನು ಆದಿತ್ಯ ರಾವ್ ಎಂದು ಗುರುತಿಸಲಾಗಿದೆ. ಆತ ನಾನೇ ಬಾಂಬ್ ಇಟ್ಟಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಈ ಪ್ರಕರಣವನ್ನು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಬೆಂಗಳೂರು ಬರುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಆತನನ್ನು ಅವರಿಗೆ ಹಸ್ತಾಂತರಿಸಲಾಗುವುದು. ಆತ ಈ ಹಿಂದೆ ಭಾಗಿಯಾದ ಘಟನೆಗಳ ಬಗ್ಗೆ ಇನ್ನಷ್ಟೇ ವಿಚಾರಣೆ ಮಾಡಬೇಕಿದೆ ಎಂದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT