ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆ ಮಧ್ಯೆ ಶರಣಾಗಿದ್ದಾನೆ ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿದರು.
ಶರಣಾದ ವ್ಯಕ್ತಿಯನ್ನು ಆದಿತ್ಯ ರಾವ್ ಎಂದು ಗುರುತಿಸಲಾಗಿದೆ. ಆತ ನಾನೇ ಬಾಂಬ್ ಇಟ್ಟಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.
ಈ ಪ್ರಕರಣವನ್ನು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಬೆಂಗಳೂರು ಬರುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಆತನನ್ನು ಅವರಿಗೆ ಹಸ್ತಾಂತರಿಸಲಾಗುವುದು. ಆತ ಈ ಹಿಂದೆ ಭಾಗಿಯಾದ ಘಟನೆಗಳ ಬಗ್ಗೆ ಇನ್ನಷ್ಟೇ ವಿಚಾರಣೆ ಮಾಡಬೇಕಿದೆ ಎಂದರು.
ಇನ್ನಷ್ಟು...
ಹೋಟೆಲ್ನಲ್ಲಿಯೇ ಬಾಂಬ್ ತಯಾರಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ. #MangaloreBomb #AdityaRao https://t.co/gSwGz4LnUr
— ಪ್ರಜಾವಾಣಿ | Prajavani (@prajavani) January 22, 2020
ಕಾರ್ಯಾಚರಣೆಗೆ ತಂದಿದ್ದ ವೈರ್ ಸರಿಯಾಗಿ ಕೆಲಸ ಮಾಡದ ಕಾರಣ ಬಾಂಬ್ ಸ್ಫೋಟ್ ಮತ್ತಷ್ಟು ವಿಳಂಬವಾಯಿತು. #Mangalore #BombDetectedInMangalorehttps://t.co/wA2ttyuojc
— ಪ್ರಜಾವಾಣಿ | Prajavani (@prajavani) January 21, 2020
ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಗ್ನಲ್ಲಿ ಸುಧಾರಿತ ಬಾಂಬ್ಗಳು ಪತ್ತೆಯಾಗಿದ್ದು ಬಾಂಬ್ ನಿಷ್ಕ್ರಿಯ ದಳದ ತಜ್ಞ ಸಿಬ್ಬಂದಿಗಳು ಬಾಂಬ್ ಚೀಲವನ್ನೇ ಸ್ಫೋಟಿಸಿದ್ದಾರೆ.#MangaloreAirport #Bombhttps://t.co/FFdFf0wWoA
— ಪ್ರಜಾವಾಣಿ | Prajavani (@prajavani) January 20, 2020
ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಆಟೊ ರಿಕ್ಷಾದಲ್ಲಿ ಬಂದು ಸುಧಾರಿತ ಬಾಂಬ್ಗಳಿರುವ ಬ್ಯಾಗ್ ಅನ್ನು ಇಟ್ಟಿರುವ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.#MangaloreAirport #Bombhttps://t.co/UkiucMlNzR
— ಪ್ರಜಾವಾಣಿ | Prajavani (@prajavani) January 20, 2020
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಆಟೊದಲ್ಲಿ ಬಂದು, ಬ್ಯಾಗ್ ಇಟ್ಟಿರೋದು ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.#BasavarajBommai #MangaloreAirport #Bombhttps://t.co/6QeAO5bzsm
— ಪ್ರಜಾವಾಣಿ | Prajavani (@prajavani) January 20, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.