<p><strong>ಮೂಡುಬಿದಿರೆ:</strong> ‘ಪುಸ್ತಕವನ್ನು ಸ್ನೇಹಿತರಾಗಿ ಯಾರು ನೋಡುತ್ತಾರೋ, ಅವರು ಯಾವತ್ತೂ ಬದುಕಿಗೆ ಬೆನ್ನು ಹಾಕಲ್ಲ’ ಎಂದು ಲೇಖಕಿ, ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ ರೇಖಾ ವಿ. ಬನ್ನಾಡಿ ಹೇಳಿದರು.</p>.<p>ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ 2021-22 ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಹಿತ್ಯದ ಓದು ಪ್ರಶ್ನಿಸುವ ಗುಣವನ್ನು ನೀಡುತ್ತದೆ. ಎಷ್ಟು ಅಪ್ರಿಯವಾದರೂ ಸತ್ಯವನ್ನು ಹೇಳುವ ತಾಕತ್ತನ್ನು ನೀಡುತ್ತದೆ. ಆತ್ಮವಿಶ್ವಾಸದ ಜತೆಗೆ ಜಗತ್ತನ್ನು ಪ್ರೀತಿಸುವ, ಸಹಬಾಳ್ವೆಯನ್ನು ಆಶಿಸುವ ಹಾಗೂ ಜೀವನ ಪ್ರೀತಿಯನ್ನು ಕರಗತಗೊಳಿಸುವ ಶಕ್ತಿಯನ್ನು ನೀಡುತ್ತದೆ. ಒಳ್ಳೆಯ ಓದುಗನಿಗೆ ಒಂಟಿತನ ಎಂದೂ ಕಾಡುವುದಿಲ್ಲ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ. ಸದಾಕತ್ ಮಾತನಾಡಿ, ’ವಿಜ್ಞಾನದ ಬೆಳವಣಿಗೆಯ ಜತೆಯಲ್ಲಿ ಸಾಹಿತ್ಯದ ಬೆಳವಣಿಗೆಯ ಪ್ರಕ್ರಿಯೆಯು ನಡೆಯುತ್ತಿರಬೇಕು. ಮನುಷ್ಯ ಮಾನವೀಯತೆಯನ್ನು ಸದಾ ತನ್ನ ಪರಮಧರ್ಮವೆಂದು ಭಾವಿಸಿ ಬದುಕಬೇಕು’ ಎಂದರು. ಧಮೇಂದ್ರ ಕುದ್ರೋಳಿ ಸ್ವಾಗತಿಸಿದರು. ಸಾಹಿತ್ಯ ಸಂಘದ ಸಂಯೋಜಕಿ ಸುಧಾರಾಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಆಶಾ ನಿರೂಪಿಸಿದರು. ಅಮೃತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ‘ಪುಸ್ತಕವನ್ನು ಸ್ನೇಹಿತರಾಗಿ ಯಾರು ನೋಡುತ್ತಾರೋ, ಅವರು ಯಾವತ್ತೂ ಬದುಕಿಗೆ ಬೆನ್ನು ಹಾಕಲ್ಲ’ ಎಂದು ಲೇಖಕಿ, ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ ರೇಖಾ ವಿ. ಬನ್ನಾಡಿ ಹೇಳಿದರು.</p>.<p>ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ 2021-22 ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಹಿತ್ಯದ ಓದು ಪ್ರಶ್ನಿಸುವ ಗುಣವನ್ನು ನೀಡುತ್ತದೆ. ಎಷ್ಟು ಅಪ್ರಿಯವಾದರೂ ಸತ್ಯವನ್ನು ಹೇಳುವ ತಾಕತ್ತನ್ನು ನೀಡುತ್ತದೆ. ಆತ್ಮವಿಶ್ವಾಸದ ಜತೆಗೆ ಜಗತ್ತನ್ನು ಪ್ರೀತಿಸುವ, ಸಹಬಾಳ್ವೆಯನ್ನು ಆಶಿಸುವ ಹಾಗೂ ಜೀವನ ಪ್ರೀತಿಯನ್ನು ಕರಗತಗೊಳಿಸುವ ಶಕ್ತಿಯನ್ನು ನೀಡುತ್ತದೆ. ಒಳ್ಳೆಯ ಓದುಗನಿಗೆ ಒಂಟಿತನ ಎಂದೂ ಕಾಡುವುದಿಲ್ಲ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ. ಸದಾಕತ್ ಮಾತನಾಡಿ, ’ವಿಜ್ಞಾನದ ಬೆಳವಣಿಗೆಯ ಜತೆಯಲ್ಲಿ ಸಾಹಿತ್ಯದ ಬೆಳವಣಿಗೆಯ ಪ್ರಕ್ರಿಯೆಯು ನಡೆಯುತ್ತಿರಬೇಕು. ಮನುಷ್ಯ ಮಾನವೀಯತೆಯನ್ನು ಸದಾ ತನ್ನ ಪರಮಧರ್ಮವೆಂದು ಭಾವಿಸಿ ಬದುಕಬೇಕು’ ಎಂದರು. ಧಮೇಂದ್ರ ಕುದ್ರೋಳಿ ಸ್ವಾಗತಿಸಿದರು. ಸಾಹಿತ್ಯ ಸಂಘದ ಸಂಯೋಜಕಿ ಸುಧಾರಾಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಆಶಾ ನಿರೂಪಿಸಿದರು. ಅಮೃತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>