ಪ್ರಭಾಕರ ಕಲ್ಲೂರಾಯ ಬನದಗದ್ದೆ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಸಾರ್ವಜನಿಕ ಸನ್ಮಾನ ನಡೆಯಲಿದೆ. ಅರಣ್ಯ ಖಾತೆ ಸಚಿವ ಆರ್ ಶಂಕರ್, ಕಾಸರಗೋಡು ಸಂಸದ ಪಿ ಕರುಣಾಕರನ್, ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಕೆ ಹರೀಶ್ ಕುಮಾರ್ ಭಾಗವಹಿಸುವರು. ಹಿರಿಯ ಜಾನಪದ ಲೇಖಕ ಹಾಗೂ ಸಂಶೋಧಕ ಕೇಳು ಮಾಸ್ತರ್ ಅಗಲ್ಪಾಡಿ ಅವರನ್ನು ಗೌರವಿಸಲಾಗುವುದು.