ಬಾಲಕನ ತಂದೆ ಉಳ್ಳಾಲದ ತ್ಯಾಗರಾಜ್ ಹಾಗೂ ತಾಯಿ ಮಮತಾ ಅವರು ಮಗನ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. ‘ಜೀವನ ಸಾರ್ಥಕತೆ’ ಕಾರ್ಯಕ್ರಮದ ಶಿಷ್ಟಾಚಾರದ ಪ್ರಕಾರ ಬಾಲಕನ ಪಿತ್ತಜನಕಾಂಗವನ್ನು ಬೆಂಗಳೂರಿನ ವೈಟ್ಫೀಲ್ಡ್ನ ಮಣಿಪಾಲ ಆಸ್ಪತ್ರೆಗೆ, ಕಣ್ಣಿನ ಕಾರ್ನಿಯಾಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಮೂತ್ರ ಜನಕಾಂಗವನ್ನು ಇಂಡಿಯಾನ ಆಸ್ಪತ್ರೆಯ ರೋಗಿಯೊಬ್ಬರಿಗೆ ಕಸಿ ಮಾಡುವ ಸಲುವಾಗಿ ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.