ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅಧ್ಯಯನ ಕೇಂದ್ರದ ಯೋಜನೆಯಡಿ 9 ಅಡಿ ಎತ್ತರದ, 600 ಕೆಜಿ ತೂಕದ ಕಂಚಿನ ಪ್ರತಿಮೆಯನ್ನು ₹ 14.30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಛತ್ತೀಸ್ಗಢದ ಮಹಾತ್ಮಗಾಂಧಿ ತೋಟಗಾರಿಕೆ ಮತ್ತು ಅರಣ್ಯ ವಿವಿ ಕುಲಪತಿ ಪ್ರೊ.ಆರ್.ಎಸ್.ಕುರೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.