<p><strong>ಉಜಿರೆ:</strong> ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಕ್ಷೇತ್ರದಲ್ಲಿ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ 17ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಬುಧವಾರ ಪಾದಪೂಜೆ, ಕಿರೀಟಧಾರಣೆ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.</p>.<p>ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಬಂದರು ಮತ್ತು ಮೀನುಗಾರಿಕಾ ಸಚಿವ ಮಾಂಕಾಳ್ ಎಸ್.ವೈದ್ಯ, ಕತ್ತಲೆಯಿಂದ ಬೆಳಕಿನ ಕಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ ಸಾಗುವಂತೆ ಸಾರ್ಥಕ ಬದುಕಿಗೆ ಮಾರ್ಗದರ್ಶನ ಮಾಡುವವರೇ ಗುರುಗಳು. ಶ್ರದ್ಧಾ-ಭಕ್ತಿಯಿಂದ ಮಾಡುವ ಗುರುಗಳ ಸೇವೆಯಿಂದ ಭಕ್ತರ ಕಲ್ಯಾಣವಾಗುತ್ತದೆ. ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಭಕ್ತರ ಕಲ್ಯಾಣಕ್ಕಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಗುರುಗಳು ನಿರಂತರ ಮಾಡುವ ಮಾರ್ಗದರ್ಶನ, ಸೇವೆ ಮತ್ತು ತ್ಯಾಗ ಶ್ಲಾಘನೀಯ. ಪೂಜ್ಯರು ಶಾಖಾ ಮಠಗಳನ್ನು ತೆರೆದು ಆಧ್ಯಾತ್ಮಿಕ ಉನ್ನತಿಗೆ ಪ್ರೇರಣೆ ನೀಡುತ್ತಿದ್ದಾರೆ. ಅವರ ಶಾಖಾ ಮಠಗಳು ಭಕ್ತರಿಗೆ ಮನೆ ಇದ್ದಂತೆ. ಸುಖ-ಶಾಂತಿ, ನೆಮ್ಮದಿಯ ತಾಣವಾಗಿದೆ ಎಂದರು.</p>.<p>ಇಂದ್ರಿಯ ನಿಗ್ರಹದಿಂದ ಆಧ್ಯಾತ್ಮಿಕ ಉನ್ನತಿ: ಏಕಾಂತದೊಂದಿಗೆ ಪ್ರಕೃತಿಯ ಮಡಿಲಲ್ಲಿ ಪ್ರಶಾಂತ ಪರಿಸರದಲ್ಲಿ ವಿವೇಕ, ವೈರಾಗ್ಯ ಮತ್ತು ಇಂದ್ರಿಯಗಳ ನಿಗ್ರಹದಿಂದ ಜಪ, ತಪ, ಧ್ಯಾನದಿಂದ ನಿರಂತರ ಆಧ್ಯಾತ್ಮಿಕ ಚಿಂತನ-ಮಂಥನ ಮಾಡಿದಾಗ ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿ ದೊರಕಿ ಲೋಕ ಕಲ್ಯಾಣವಾಗುತ್ತದೆ. ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾವು ಎಲ್ಲರನ್ನೂ ಪ್ರೀತಿ-ವಿಶ್ವಾಸದಿಂದ ಕಂಡು ವಿಶ್ವಮಾನವರಾಗಬೇಕು. ಪುಸ್ತಕದಲ್ಲಿರುವ ಜ್ಞಾನ ಮಸ್ತಕಕ್ಕೆ ಬರಬೇಕು. ಎಲ್ಲರೂ ಮಾನಸಿಕ ಮಾಲಿನ್ಯವನ್ನು ದೂರ ಮಾಡಿ ದೇವರ ಭಕ್ತಿ, ಧ್ಯಾನ, ಉಪಾಸನೆ ಮಾಡಬೇಕು. ಶಿಕ್ಷಕರು ಮತ್ತು ರಕ್ಷಕರು ಮಕ್ಕಳಿಗೆ ಪುರಾಣ ಕಥೆಗಳನ್ನು ಹೇಳಿ ಉತ್ತಮ ಸಂಸ್ಕಾರ ಮೂಡಿಸಬೇಕು ಎಂದು ಸಲಹೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹನಾಯಕ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಹರಿಕೃಷ್ಣ ಬಂಟ್ವಾಳ, ಜೆಡಿಎಸ್ ನಾಯಕ ಸೂರಜ್ ಸೋನಿ ಮಾತನಾಡಿದರು.</p>.<p>ತುಕಾರಾಮ ಪೂಜಾರಿ ಸ್ವಾಗತಿಸಿದರು. ಪ್ರೊ.ಕೇಶವ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.</p>.<div><blockquote>ನಾವು ಎಷ್ಟು ಗಳಿಸಿದ್ದೇವೆ ಅನ್ನುವುದಕ್ಕಿಂತ ಗಳಿಸಿದ್ದನ್ನು ಹೇಗೆ ಇತರರ ಕಲ್ಯಾಣಕ್ಕಾಗಿ ಬಳಸುತ್ತೇವೆ ಎಂಬುದು ಮುಖ್ಯ.</blockquote><span class="attribution">ನಾವು ಎಷ್ಟು ಗಳಿಸಿದ್ದೇವೆ ಅನ್ನುವುದಕ್ಕಿಂತ ಗಳಿಸಿದ್ದನ್ನು ಹೇಗೆ ಇತರರ ಕಲ್ಯಾಣಕ್ಕಾಗಿ ಬಳಸುತ್ತೇವೆ ಎಂಬುದು ಮುಖ್ಯ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಕ್ಷೇತ್ರದಲ್ಲಿ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ 17ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಬುಧವಾರ ಪಾದಪೂಜೆ, ಕಿರೀಟಧಾರಣೆ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.</p>.<p>ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಬಂದರು ಮತ್ತು ಮೀನುಗಾರಿಕಾ ಸಚಿವ ಮಾಂಕಾಳ್ ಎಸ್.ವೈದ್ಯ, ಕತ್ತಲೆಯಿಂದ ಬೆಳಕಿನ ಕಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ ಸಾಗುವಂತೆ ಸಾರ್ಥಕ ಬದುಕಿಗೆ ಮಾರ್ಗದರ್ಶನ ಮಾಡುವವರೇ ಗುರುಗಳು. ಶ್ರದ್ಧಾ-ಭಕ್ತಿಯಿಂದ ಮಾಡುವ ಗುರುಗಳ ಸೇವೆಯಿಂದ ಭಕ್ತರ ಕಲ್ಯಾಣವಾಗುತ್ತದೆ. ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಭಕ್ತರ ಕಲ್ಯಾಣಕ್ಕಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಗುರುಗಳು ನಿರಂತರ ಮಾಡುವ ಮಾರ್ಗದರ್ಶನ, ಸೇವೆ ಮತ್ತು ತ್ಯಾಗ ಶ್ಲಾಘನೀಯ. ಪೂಜ್ಯರು ಶಾಖಾ ಮಠಗಳನ್ನು ತೆರೆದು ಆಧ್ಯಾತ್ಮಿಕ ಉನ್ನತಿಗೆ ಪ್ರೇರಣೆ ನೀಡುತ್ತಿದ್ದಾರೆ. ಅವರ ಶಾಖಾ ಮಠಗಳು ಭಕ್ತರಿಗೆ ಮನೆ ಇದ್ದಂತೆ. ಸುಖ-ಶಾಂತಿ, ನೆಮ್ಮದಿಯ ತಾಣವಾಗಿದೆ ಎಂದರು.</p>.<p>ಇಂದ್ರಿಯ ನಿಗ್ರಹದಿಂದ ಆಧ್ಯಾತ್ಮಿಕ ಉನ್ನತಿ: ಏಕಾಂತದೊಂದಿಗೆ ಪ್ರಕೃತಿಯ ಮಡಿಲಲ್ಲಿ ಪ್ರಶಾಂತ ಪರಿಸರದಲ್ಲಿ ವಿವೇಕ, ವೈರಾಗ್ಯ ಮತ್ತು ಇಂದ್ರಿಯಗಳ ನಿಗ್ರಹದಿಂದ ಜಪ, ತಪ, ಧ್ಯಾನದಿಂದ ನಿರಂತರ ಆಧ್ಯಾತ್ಮಿಕ ಚಿಂತನ-ಮಂಥನ ಮಾಡಿದಾಗ ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿ ದೊರಕಿ ಲೋಕ ಕಲ್ಯಾಣವಾಗುತ್ತದೆ. ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾವು ಎಲ್ಲರನ್ನೂ ಪ್ರೀತಿ-ವಿಶ್ವಾಸದಿಂದ ಕಂಡು ವಿಶ್ವಮಾನವರಾಗಬೇಕು. ಪುಸ್ತಕದಲ್ಲಿರುವ ಜ್ಞಾನ ಮಸ್ತಕಕ್ಕೆ ಬರಬೇಕು. ಎಲ್ಲರೂ ಮಾನಸಿಕ ಮಾಲಿನ್ಯವನ್ನು ದೂರ ಮಾಡಿ ದೇವರ ಭಕ್ತಿ, ಧ್ಯಾನ, ಉಪಾಸನೆ ಮಾಡಬೇಕು. ಶಿಕ್ಷಕರು ಮತ್ತು ರಕ್ಷಕರು ಮಕ್ಕಳಿಗೆ ಪುರಾಣ ಕಥೆಗಳನ್ನು ಹೇಳಿ ಉತ್ತಮ ಸಂಸ್ಕಾರ ಮೂಡಿಸಬೇಕು ಎಂದು ಸಲಹೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹನಾಯಕ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಹರಿಕೃಷ್ಣ ಬಂಟ್ವಾಳ, ಜೆಡಿಎಸ್ ನಾಯಕ ಸೂರಜ್ ಸೋನಿ ಮಾತನಾಡಿದರು.</p>.<p>ತುಕಾರಾಮ ಪೂಜಾರಿ ಸ್ವಾಗತಿಸಿದರು. ಪ್ರೊ.ಕೇಶವ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.</p>.<div><blockquote>ನಾವು ಎಷ್ಟು ಗಳಿಸಿದ್ದೇವೆ ಅನ್ನುವುದಕ್ಕಿಂತ ಗಳಿಸಿದ್ದನ್ನು ಹೇಗೆ ಇತರರ ಕಲ್ಯಾಣಕ್ಕಾಗಿ ಬಳಸುತ್ತೇವೆ ಎಂಬುದು ಮುಖ್ಯ.</blockquote><span class="attribution">ನಾವು ಎಷ್ಟು ಗಳಿಸಿದ್ದೇವೆ ಅನ್ನುವುದಕ್ಕಿಂತ ಗಳಿಸಿದ್ದನ್ನು ಹೇಗೆ ಇತರರ ಕಲ್ಯಾಣಕ್ಕಾಗಿ ಬಳಸುತ್ತೇವೆ ಎಂಬುದು ಮುಖ್ಯ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>