ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ದೇವಾಲಯಗಳಿಗೆ ಭೇಟಿ ನೀಡಿದ ಬ್ರಿಜೇಶ್ ಚೌಟ

Published 13 ಏಪ್ರಿಲ್ 2024, 6:07 IST
Last Updated 13 ಏಪ್ರಿಲ್ 2024, 6:07 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಶುಕ್ರವಾರ ಹಲವಾರು ಪುಣ್ಯಕ್ಷೇತ್ರಗಳ ದರ್ಶನ ಪಡೆದರು.

ಸಸಿಹಿತ್ಲು ಕರ್ಕೇರ ಕುಟುಂಬಸ್ಥರ ಮೂಲಸ್ಥಾನದ ನಾಗಬ್ರಹ್ಮ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಬಳಿಕ ಸುರತ್ಕಲ್ ವೀರಭದ್ರ ಮಹಾಮಾಯಿ ದೇವಸ್ಥಾನ, ಪುರಾತನ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಭಾಗವಹಿಸಿದರು.

ಅಲ್ಲಿಂದ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ, ಪಣಂಬೂರು ದೊಡ್ಡಮನೆ ಶ್ರೀಕಾಂತು ಶೆಟ್ಟಿಗಾರ ಕುಟುಂಬಸ್ಥರ ಧರ್ಮ ನೇಮೋತ್ಸವಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಬಂಟ್ವಾಳ ತಾಲ್ಲೂಕಿನ ನಿಟಿಲಾಕ್ಷ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸಂಜೆ ಬಾಳ್ತಿಲ ಕುಂದಾಯ ರಕ್ತೇಶ್ವರಿ ದೇವಸ್ಥಾನ, ಕಶೆಕೋಡಿ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT