<p><strong>ಮೂಡುಬಿದಿರೆ:</strong> ಇಲ್ಲಿನ ಪುರಸಭೆ ಮತ್ತು ರೋಟರಿ ಕ್ಲಬ್ ಆಶ್ರಯದಲ್ಲಿ ‘ಪ್ಲಾಸ್ಟಿಕ್ ಚೀಲ ಬೇಡ ಅನ್ನಿ; ಬಟ್ಟೆ ಚೀಲ ನೀವು ತನ್ನಿ’ ಅಭಿಯಾನವು ಶುಕ್ರವಾರ ಮೂಡುಬಿದಿರೆಯ ಸಂತೆ ಮಾರುಕಟ್ಟೆಯಲ್ಲಿ ನಡೆಯಿತು.</p>.<p>ಪುರಸಭೆ ಪರಿಸರ ಎಂಜಿನಿಯರ್ ಶಿಲ್ಪಾ ಮಾತನಾಡಿ, ಏಕ ಬಳಕೆಯ ಪ್ಲಾಸ್ಟಿಕ್ನಿಂದ ಕಸ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಅಭಿಯಾನವನ್ನು ಕೈಗೊಳ್ಳಲಾಗಿದೆ. ಮಾರುಕಟ್ಟೆಗೆ ಬರುವ ಗ್ರಾಹಕರು ಚೀಲವನ್ನು ತರದೆ ಪ್ಲಾಸ್ಟಿಕ್ ಚೀಲವನ್ನು ತೆಗೆದುಕೊಳ್ಳುತ್ತಿದ್ದಾರೆ. ಅಂಥವರಲ್ಲಿ ಬಟ್ಟೆ ಚೀಲಗಳನ್ನು ಬಳಸುವಂತೆ ಪ್ರೇರೇಪಿಸಲಾಗುತ್ತಿದ್ದು, ಎರಡು ಬಟ್ಟೆ ಚೀಲಗಳಿಗೆ ₹5 ಬೆಲೆ ಇದೆ ಎಂದರು.</p>.<p>ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಪಿ.ಕೆ.ಥಾಮಸ್, ರೋಟರಿ ಕ್ಲಬ್ ಅಧ್ಯಕ್ಷ ರವಿ ಪ್ರಸಾದ್ ಉಪಾಧ್ಯಾಯ, ಸದಸ್ಯ ಸಿ.ಎಚ್.ಗಫೂರ್, ಮಹಮ್ಮದ್ ಆರಿಫ್, ಜಯರಾಮ್ ಕೋಟ್ಯಾನ್, ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಸ್ವಚ್ಛತಾ ರಾಯಭಾರಿ ಸಂಧ್ಯಾ ಭಟ್ ಭಾಗವಹಿಸಿದ್ದರು.</p>.<p>ಆಳ್ವಾಸ್ ಕಾಲೇಜಿನ ಬಿಎಸ್ಡಬ್ಲ್ಯು, ಎಂಎಸ್ಡಬ್ಲ್ಯು, ಪತ್ರಿಕೋದ್ಯಮದ ವಿಭಾಗ ಮತ್ತು ವಾಮದಪದವು ಪದವಿ ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಜಾಗೃತಿ ಮೂಡಿಸಿದರು. ದೇಣಿಗೆ ಪೆಟ್ಟಿಗೆ ಮೂಲಕ ಬಟ್ಟೆ ಚೀಲಕ್ಕಾಗಿ ದೇಣಿಗೆ ಸಂಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಇಲ್ಲಿನ ಪುರಸಭೆ ಮತ್ತು ರೋಟರಿ ಕ್ಲಬ್ ಆಶ್ರಯದಲ್ಲಿ ‘ಪ್ಲಾಸ್ಟಿಕ್ ಚೀಲ ಬೇಡ ಅನ್ನಿ; ಬಟ್ಟೆ ಚೀಲ ನೀವು ತನ್ನಿ’ ಅಭಿಯಾನವು ಶುಕ್ರವಾರ ಮೂಡುಬಿದಿರೆಯ ಸಂತೆ ಮಾರುಕಟ್ಟೆಯಲ್ಲಿ ನಡೆಯಿತು.</p>.<p>ಪುರಸಭೆ ಪರಿಸರ ಎಂಜಿನಿಯರ್ ಶಿಲ್ಪಾ ಮಾತನಾಡಿ, ಏಕ ಬಳಕೆಯ ಪ್ಲಾಸ್ಟಿಕ್ನಿಂದ ಕಸ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಅಭಿಯಾನವನ್ನು ಕೈಗೊಳ್ಳಲಾಗಿದೆ. ಮಾರುಕಟ್ಟೆಗೆ ಬರುವ ಗ್ರಾಹಕರು ಚೀಲವನ್ನು ತರದೆ ಪ್ಲಾಸ್ಟಿಕ್ ಚೀಲವನ್ನು ತೆಗೆದುಕೊಳ್ಳುತ್ತಿದ್ದಾರೆ. ಅಂಥವರಲ್ಲಿ ಬಟ್ಟೆ ಚೀಲಗಳನ್ನು ಬಳಸುವಂತೆ ಪ್ರೇರೇಪಿಸಲಾಗುತ್ತಿದ್ದು, ಎರಡು ಬಟ್ಟೆ ಚೀಲಗಳಿಗೆ ₹5 ಬೆಲೆ ಇದೆ ಎಂದರು.</p>.<p>ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಪಿ.ಕೆ.ಥಾಮಸ್, ರೋಟರಿ ಕ್ಲಬ್ ಅಧ್ಯಕ್ಷ ರವಿ ಪ್ರಸಾದ್ ಉಪಾಧ್ಯಾಯ, ಸದಸ್ಯ ಸಿ.ಎಚ್.ಗಫೂರ್, ಮಹಮ್ಮದ್ ಆರಿಫ್, ಜಯರಾಮ್ ಕೋಟ್ಯಾನ್, ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಸ್ವಚ್ಛತಾ ರಾಯಭಾರಿ ಸಂಧ್ಯಾ ಭಟ್ ಭಾಗವಹಿಸಿದ್ದರು.</p>.<p>ಆಳ್ವಾಸ್ ಕಾಲೇಜಿನ ಬಿಎಸ್ಡಬ್ಲ್ಯು, ಎಂಎಸ್ಡಬ್ಲ್ಯು, ಪತ್ರಿಕೋದ್ಯಮದ ವಿಭಾಗ ಮತ್ತು ವಾಮದಪದವು ಪದವಿ ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಜಾಗೃತಿ ಮೂಡಿಸಿದರು. ದೇಣಿಗೆ ಪೆಟ್ಟಿಗೆ ಮೂಲಕ ಬಟ್ಟೆ ಚೀಲಕ್ಕಾಗಿ ದೇಣಿಗೆ ಸಂಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>