ಶಾಸಕ ಹರೀಶ್ ಪೂಂಜ ಮಾತನಾಡಿ, ‘ಸಮಾಜದ ಕಟ್ಟಕಡೆಯ ಅಶಕ್ತ ವ್ಯಕ್ತಿಗಳನ್ನು ಗುರುತಿಸಿ ಅವರ ಸಮಸ್ಯೆಗೆ ಸ್ಪಂದಿಸಿದ ‘ಸ್ಪಂದನ ಬಂಟರ ಸೇವಾ ತಂಡದ’ 25ನೇ ಸೇವಾ ಯೋಜನೆಯ ಈ ಕಾರ್ಯಕ್ರಮ ಪ್ರೇರಣದಾಯಕ. ಕೊರೊನಾ ಸಂದರ್ಭದಲ್ಲಿ ಬಂಟ ಸಮಾಜದವರ ಸಮಸ್ಯೆಗೆ ಸ್ಪಂದಿಸಬೇಕು ಎಂಬ ಉದ್ದೇಶದಿಂದ ಉದ್ಯಮಿ ಶಶಿಧರ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಸ್ಪಂದನ ಬಂಟರ ಸೇವಾ ತಂಡ ಆರಂಭವಾಯಿತು. ಆದರೆ, ಇಂದು ಕೇವಲ ಒಂದೇ ಸಮುದಾಯದಕ್ಕೆ ಸೀಮಿತವಾಗದೆ ಎಲ್ಲ ಸಮುದಾಯದ ಕಷ್ಟಕ್ಕೂ ಸ್ಪಂದಿಸುತ್ತೇವೆ ಎನ್ನುವ ಮೂಲಕ ನಾವು ಎಲ್ಲರೂ ಹಿಂದೂ ಸಮುದಾಯದವರು ಎಂಬ ಪರಿಕಲ್ಪನೆಯನ್ನು ವ್ಯಕ್ತಪಡಿಸಿದೆ’ ಎಂದರು.