ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನಡ್ಕ: ಹೆದ್ದಾರಿಯಲ್ಲಿ ಉರುಳಿದ ಬಸ್- ಪ್ರಯಾಣಿಕರಿಗೆ ಸಣ್ಣ ಪುಟ್ಟ‌ ಗಾಯ

Last Updated 3 ಆಗಸ್ಟ್ 2022, 3:23 IST
ಅಕ್ಷರ ಗಾತ್ರ

ಮಂಗಳೂರು: ರಿಕ್ಷಾಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ‌ ನಿಯಂತ್ರಣ ಕಳೆದುಕೊಂಡ ಖಾಸಗಿ ಬಾ್ ಕಾರ್ಕಳ- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬನ್ನಡ್ಕ ಬಳಿ ಬುಧವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ.

ಬಸ್ ಚಾಲಕನ ಸೊಂಟಕ್ಕೆ ಏಟಾಗಿದ್ದು, ಬಸ್ನನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಂಗಳೂರಿನಿಂದ ಕಳಸಕ್ಕೆ ಹೋಗುವ ಕೆಕೆಬಿ ಬಸ್ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಅಧಿಕ ಪ್ರಯಾಣಿಕರಿದ್ದರು. ಬಸ್ ಬೆಳಿಗ್ಗೆ 6 ಗಂಟೆಗೆ ಮಂಗಳೂರಿನಿಂದ ಹೊರಟಿತ್ತು. ಮೂಡುಬಿದಿರೆ ಬೆಳುವಾಯಿ ಬಳಿಯ ಬನ್ನಡ್ಕದಲ್ಲಿ ರಿಕ್ಷಾವೊಂದು ಅಡ್ಡ ಬಂದಿತ್ತು.ರಿಕ್ಷಾಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಪಕ್ಕಕ್ಕೆ ಸರಿಸಿದ್ದರು ಎಂದು ಪ್ರಯಾಣಿಕರೊಬ್ಬರು 'ಪ್ರಜಾವಾಣಿ'ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT