ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ಬಸ್ -ಬೈಕ್ ಡಿಕ್ಕಿ: ಸಹೋದರರಿಬ್ಬರು ಸಾವು

Last Updated 18 ಮಾರ್ಚ್ 2022, 15:57 IST
ಅಕ್ಷರ ಗಾತ್ರ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಗರ್ಡಾಡಿ ನಂದಿಬೆಟ್ಟ ಬಳಿ ಶುಕ್ರವಾರ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸ್ಥಳದಲ್ಲೇ ಮೃತಪಟ್ಟರು.

ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ, ನಿವೃತ ಶಿಕ್ಷಕ, ದಿವಂಗತ ಮರ್ಹೂಮ್ ಅಬ್ದುಲ್ ರಝಾಕ್ ಅವರ ಮಕ್ಕಳಾದ ಹಮ್ಮಬ್ಬ ಸಿರಾಜ್ (28) ಮತ್ತು ಕುತುಬುದ್ದೀನ್ ಸಾದಿಕ್ (32) ಎಂದು ಗುರುತಿಸಲಾಗಿದೆ.

ಇವರು ವೇಣೂರು ಆರಂಬೋಡಿ ಸಮೀಪದ ಅಂಗರಕರಿಯ ಸೇತುವೆ ಬಳಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದ ಸಹೋದರಿಯ ಪತಿ(ಬಾವ)ಯ ಸಹೋದರನ ಮನೆಗೆ ಹೋಗಿ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಆದ ತಕ್ಷಣ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ವಾಹನದಲ್ಲಿ ಆಸ್ಪತ್ರೆಗೆ ಕರೆತಂದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಇಬ್ಬರೂ ಸಹೋದರರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಐದು ತಿಂಗಳ ಹಿಂದೆ ಊರಿಗೆ ಮರಳಿದ್ದರೆಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT