ಕೆಇಟಿ ಆದೇಶದಂತೆ ಕ್ರಮ: ಮಂಗಳೂರು ಉಪ ವಿಭಾಗಾಧಿಕಾರಿ ವರ್ಗಾವಣೆ ವಿಚಾರವನ್ನು ಕೆಇಟಿ ಆದೇಶದ ಪ್ರಕಾರ ಕಾರ್ಯಗತಗೊಳಿಸಲಾಗುವುದು. ರವಿಚಂದ್ರ ನಾಯಕ್ ಅವರು ವರ್ಗಾವಣೆ ಪ್ರಶ್ನಿಸಿ ಕೆಇಟಿಯಿಂದ ತಡೆಯಾಜ್ಞೆ ತಂದಿದ್ದಾರೆ. ಅವರು ಮರಳಿ ಅಧಿಕಾರ ಸ್ವೀಕರಿಸಬೇಕಾದರೆ, ಕೆಇಟಿ ಮತ್ತೆ ಆದೇಶ ಹೊರಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸ್ಪಷ್ಟಪಡಿಸಿದರು.