<p><strong>ಉಪ್ಪಿನಂಗಡಿ:</strong> ಇಲ್ಲಿನ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಶನಿವಾರ ರಾತ್ರಿ ಹಿಮ್ಮಖವಾಗಿ ಚಲಿಸಿದ್ದರಿಂದ ಎರಡು ಅಂಗಡಿಗಳಿಗೆ ಮತ್ತು ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಹೋಗುವ ಕೆ.ಎ-21-ಬಿ.4724 ನೋಂದಣಿ ಸಂಖ್ಯೆಯ ಖಾಸಗಿ ಬಸ್ಸನ್ನು ಅದರ ಚಾಲಕ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಹಿಮ್ಮುಖವಾಗಿ ಚಲಾಯಿಸಿದಾಗ, ಅವಘಡ ಸಂಭವಿಸಿದೆ. ಬಸ್ ವಾಹನ ನಿಲುಗಡೆ ಪ್ರದೇಶವನ್ನು ದಾಟಿ, ನಿಲ್ದಾಣದ ಒಳಗಡೆ ಇರುವ ವಾಣಿಜ್ಯ ಕಟ್ಟಡಕ್ಕೆ ನುಗ್ಗಿದ್ದರಿಂದ ಅಲ್ಲಿರುವ ಅಂಗಡಿಗಳಿಗೆ ಹಾನಿಯಾಗಿದೆ.</p>.<p>ನಾಗರಾಜ್ ಭಟ್ ಎಂಬುವರಿಗೆ ಸೇರಿದ ಬೇಕರಿ, ತಂಪು ಪಾನೀಯ ಮಾರಾಟದ ಅಂಗಡಿಗೆ ಹಾಗೂ ಅನಿಲ್ ಕುಮಾರ್ ಎಂಬುವರಿಗೆ ಸೇರಿದ ಬೇಕರಿ ಮತ್ತು ಸಿಹಿ ತಿಂಡಿ ಮಾರಾಟದ ಅಂಗಡಿಗೆ ಹಾನಿಯಾಗಿದೆ. ಎರಡೂ ಅಂಗಡಿಗಳಿಗೆ ತಲಾ ₹60 ಸಾವಿರದಷ್ಟು ಹಾನಿ ಉಂಟಾಗಿದೆ ಎಂದು ಅಂಗಡಿ ಮಾಲೀಕರು ದೂರಿದ್ದಾರೆ.</p>.<p>ವಾಹನ ನಿಲುಗಡೆ ಪ್ರದೇಶದಲ್ಲಿದ್ದ 1 ಕಾರು ಮತ್ತು 4 ದ್ವಿಚಕ್ರ ವಾಹನಗಳಿಗೆ ಬಸ್ ಡಿಕ್ಕಿ ಹೊಡೆದು ಹಾನಿಯಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬಸ್ ನಿಲ್ದಾಣದ ಪ್ರದೇಶ ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದು, ಅಂಗಡಿಗಳಲ್ಲೂ ಜನರು ಇರುತ್ತಿದ್ದರು. ಆದರೆ, ದುರ್ಘಟನೆ ನಡೆದ ಸಂದರ್ಭದಲ್ಲಿ ಬೆರಳೆಣಿಕೆಯ ಜನರಿದ್ದು, ಅಪಾಯ ಅರಿತ ಅವರು ಸ್ಥಳದಿಂದ ಓಡಿ ಪಾರಾಗಿದ್ದಾರೆ. ಅಂಗಡಿಯಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ಇಲ್ಲಿನ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಶನಿವಾರ ರಾತ್ರಿ ಹಿಮ್ಮಖವಾಗಿ ಚಲಿಸಿದ್ದರಿಂದ ಎರಡು ಅಂಗಡಿಗಳಿಗೆ ಮತ್ತು ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಹೋಗುವ ಕೆ.ಎ-21-ಬಿ.4724 ನೋಂದಣಿ ಸಂಖ್ಯೆಯ ಖಾಸಗಿ ಬಸ್ಸನ್ನು ಅದರ ಚಾಲಕ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಹಿಮ್ಮುಖವಾಗಿ ಚಲಾಯಿಸಿದಾಗ, ಅವಘಡ ಸಂಭವಿಸಿದೆ. ಬಸ್ ವಾಹನ ನಿಲುಗಡೆ ಪ್ರದೇಶವನ್ನು ದಾಟಿ, ನಿಲ್ದಾಣದ ಒಳಗಡೆ ಇರುವ ವಾಣಿಜ್ಯ ಕಟ್ಟಡಕ್ಕೆ ನುಗ್ಗಿದ್ದರಿಂದ ಅಲ್ಲಿರುವ ಅಂಗಡಿಗಳಿಗೆ ಹಾನಿಯಾಗಿದೆ.</p>.<p>ನಾಗರಾಜ್ ಭಟ್ ಎಂಬುವರಿಗೆ ಸೇರಿದ ಬೇಕರಿ, ತಂಪು ಪಾನೀಯ ಮಾರಾಟದ ಅಂಗಡಿಗೆ ಹಾಗೂ ಅನಿಲ್ ಕುಮಾರ್ ಎಂಬುವರಿಗೆ ಸೇರಿದ ಬೇಕರಿ ಮತ್ತು ಸಿಹಿ ತಿಂಡಿ ಮಾರಾಟದ ಅಂಗಡಿಗೆ ಹಾನಿಯಾಗಿದೆ. ಎರಡೂ ಅಂಗಡಿಗಳಿಗೆ ತಲಾ ₹60 ಸಾವಿರದಷ್ಟು ಹಾನಿ ಉಂಟಾಗಿದೆ ಎಂದು ಅಂಗಡಿ ಮಾಲೀಕರು ದೂರಿದ್ದಾರೆ.</p>.<p>ವಾಹನ ನಿಲುಗಡೆ ಪ್ರದೇಶದಲ್ಲಿದ್ದ 1 ಕಾರು ಮತ್ತು 4 ದ್ವಿಚಕ್ರ ವಾಹನಗಳಿಗೆ ಬಸ್ ಡಿಕ್ಕಿ ಹೊಡೆದು ಹಾನಿಯಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬಸ್ ನಿಲ್ದಾಣದ ಪ್ರದೇಶ ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದು, ಅಂಗಡಿಗಳಲ್ಲೂ ಜನರು ಇರುತ್ತಿದ್ದರು. ಆದರೆ, ದುರ್ಘಟನೆ ನಡೆದ ಸಂದರ್ಭದಲ್ಲಿ ಬೆರಳೆಣಿಕೆಯ ಜನರಿದ್ದು, ಅಪಾಯ ಅರಿತ ಅವರು ಸ್ಥಳದಿಂದ ಓಡಿ ಪಾರಾಗಿದ್ದಾರೆ. ಅಂಗಡಿಯಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>