ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುರುಷರಕಟ್ಟೆ: ಬಸ್ ಡಿಕ್ಕಿ– ಬೈಕ್ ಸವಾರ ಸ್ಥಳದಲ್ಲೇ ಸಾವು

Published 16 ಮೇ 2024, 6:12 IST
Last Updated 16 ಮೇ 2024, 6:12 IST
ಅಕ್ಷರ ಗಾತ್ರ

ಪುತ್ತೂರು: ಇಲ್ಲಿನ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಬಸ್‌ ಡಿಕ್ಕಿ ಹೊಡೆದು, ಬೈಕ್ ಸವಾರರೊಬ್ಬರು ಬುಧವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಕುಂಡಡ್ಕ ಬಾಲಮೂಲೆಯ ಮೋಕ್ಷಿತ್ (23) ಎಂದು ಗುರುತಿಸಲಾಗಿದೆ. ಪುರುಷರಕಟ್ಟೆಯ ಬಿಂದು ಕಾರ್ಖಾನೆಯಲ್ಲಿ ಅವರು ಶಿಪಾನ್ ಮೆಷಿನ್ ಆಪರೇಟರ್ ಆಗಿದ್ದರು. ಬೈಕನ್ನು ಸರ್ವಿಸ್ ಸ್ಟೇಷನ್‌ಗೆ ಒಯ್ದಿದ್ದ ಅವರು ಹಿಂತಿರುಗಿ ಬರುವಾಗ ಅಪಘಾತ ಸಂಭವಿಸಿದೆ.

ಯುವಕನ ತಂದೆ ಆನಂದ ಗೌಡ ಅವರು ಪುತ್ತೂರಿನ ಸಂಚಾರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT