ಸಾಮಾನ್ಯ ಬೆಡ್, ಆಮ್ಲಜನಕ ಬೆಡ್, ವೆಂಟಿಲೆಟರ್ ಬೆಡ್ಗಾಗಿ ಜನರು ಕಣ್ಣೀರಿಡುತ್ತಿದ್ದಾರೆ. ಸರಿಯಾದ ಸಮಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೆ ನೂರಾರು ಜನ ಜೀವ ಕಳೆದುಕೊಂಡಿದ್ದಾರೆ. ಆದರೆ ಜಿಲ್ಲಾಡಳಿತ ಸಾವಿನ ಸಂಖ್ಯೆಯನ್ನು ಸರಿಯಾಗಿ ನೀಡುತ್ತಿಲ್ಲ. ಸುಳ್ಳು ಲೆಕ್ಕ ನೀಡುತ್ತಿದೆ. ಲಸಿಕೆ ಸಿಗುತ್ತಿಲ್ಲ. ಇಂತಹ ಸತ್ಯ ಸಂಗತಿಗಳನ್ನು ಅರಿಯಬೇಕಾದರೆ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ವಾಸ್ತವ್ಯ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.