<p><strong>ಮಂಗಳೂರು</strong>: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ (ಚಾರ್ಟರ್ಡ್ ಅಕೌಂಟೆಂಟ್) ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲಾರ್ ಡಿಸಿಲ್ವ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಸೋಮವಾರ ಫಲಿತಾಂಶ ಪ್ರಕಟಗೊಂಡಿದೆ.</p>.<p>‘ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತು. ಆದರೆ ನಾನು ಉತ್ತಮವಾಗಿ ಪರೀಕ್ಷೆ ಎದುರಿಸಿದ್ದೆ. ಪ್ರಥಮ ರ್ಯಾಂಕ್ ನಿರೀಕ್ಷೆ ಮಾಡಿರಲಿಲ್ಲ. ಸಿ.ಎ. ಪರೀಕ್ಷೆ ತೇರ್ಗಡೆಯಾಗುವುದೇ ಅದ್ಭುತ’ ಎಂದು ರುತ್ ಡಿಸಿಲ್ವ ಪ್ರತಿಕ್ರಿಯಿಸಿದರು.</p>.<p>‘ಸಿ.ಎ. ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದು ರುತ್ ಇತಿಹಾಸ ಸೃಷ್ಟಿಸಿದ್ದಾರೆ. ಆಕೆ ಛಲದಿಂದ ಅಧ್ಯಯನ ಮಾಡಿ, ಸಾಧನೆ ಮಾಡಿದ್ದಾರೆ’ ಎಂದು ಮಾರ್ಗದರ್ಶಕ ನಂದಗೋಪಾಲ್ ತಿಳಿಸಿದರು.</p>.<p>ರುತ್ ಅವರಿಗೆ ತರಬೇತಿ ನೀಡಿದ್ದ ವಿವಿಯನ್ ಪ್ರತಿಕ್ರಿಯಿಸಿ, ‘ರುತ್ ಸಂವಹನ ಕೌಶಲ ಅತ್ಯುತ್ತಮವಾಗಿದೆ. ತನ್ನ ಸಾಮರ್ಥ್ಯದ ಬಗ್ಗೆ ದೃಢ ನಂಬಿಕೆ ಹೊಂದಿರುವುದೇ ಆಕೆಯ ಸಾಧನೆಯ ಯಶಸ್ಸು’ ಎಂದಿದ್ದಾರೆ.</p>.<p>ಈಕೆ ಮಂಗಳೂರಿನ ರಫರ್ಟ್ ಡಿಸಿಲ್ವ ಮತ್ತು ರೋಸಿ ಮಾರಿಯಾ ಡಿಸಿಲ್ವ ದಂಪತಿ ಪುತ್ರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ (ಚಾರ್ಟರ್ಡ್ ಅಕೌಂಟೆಂಟ್) ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲಾರ್ ಡಿಸಿಲ್ವ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಸೋಮವಾರ ಫಲಿತಾಂಶ ಪ್ರಕಟಗೊಂಡಿದೆ.</p>.<p>‘ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತು. ಆದರೆ ನಾನು ಉತ್ತಮವಾಗಿ ಪರೀಕ್ಷೆ ಎದುರಿಸಿದ್ದೆ. ಪ್ರಥಮ ರ್ಯಾಂಕ್ ನಿರೀಕ್ಷೆ ಮಾಡಿರಲಿಲ್ಲ. ಸಿ.ಎ. ಪರೀಕ್ಷೆ ತೇರ್ಗಡೆಯಾಗುವುದೇ ಅದ್ಭುತ’ ಎಂದು ರುತ್ ಡಿಸಿಲ್ವ ಪ್ರತಿಕ್ರಿಯಿಸಿದರು.</p>.<p>‘ಸಿ.ಎ. ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದು ರುತ್ ಇತಿಹಾಸ ಸೃಷ್ಟಿಸಿದ್ದಾರೆ. ಆಕೆ ಛಲದಿಂದ ಅಧ್ಯಯನ ಮಾಡಿ, ಸಾಧನೆ ಮಾಡಿದ್ದಾರೆ’ ಎಂದು ಮಾರ್ಗದರ್ಶಕ ನಂದಗೋಪಾಲ್ ತಿಳಿಸಿದರು.</p>.<p>ರುತ್ ಅವರಿಗೆ ತರಬೇತಿ ನೀಡಿದ್ದ ವಿವಿಯನ್ ಪ್ರತಿಕ್ರಿಯಿಸಿ, ‘ರುತ್ ಸಂವಹನ ಕೌಶಲ ಅತ್ಯುತ್ತಮವಾಗಿದೆ. ತನ್ನ ಸಾಮರ್ಥ್ಯದ ಬಗ್ಗೆ ದೃಢ ನಂಬಿಕೆ ಹೊಂದಿರುವುದೇ ಆಕೆಯ ಸಾಧನೆಯ ಯಶಸ್ಸು’ ಎಂದಿದ್ದಾರೆ.</p>.<p>ಈಕೆ ಮಂಗಳೂರಿನ ರಫರ್ಟ್ ಡಿಸಿಲ್ವ ಮತ್ತು ರೋಸಿ ಮಾರಿಯಾ ಡಿಸಿಲ್ವ ದಂಪತಿ ಪುತ್ರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>