ಎಸಿಪಿ ಕೋದಂಡರಾಮ್ ನೇತೃತ್ವದ ತನಿಖಾ ತಂಡವು ವಿವಿಧ ಆಯಾಮಗಳಿಂದ ತನಿಖೆ ನಡೆಸಿ, 2019 ರ ಆಗಸ್ಟ್ 26ರಂದು ಅಂತಿಮ ವರದಿಯನ್ನು ಸಲ್ಲಿಸಿತ್ತು. ಸಿದ್ದಾರ್ಥ ಅವರು ಉಸಿರುಗಟ್ಟಿ ಮೃತಪಟ್ಟಿದ್ದು, ಆತ್ಮಹತ್ಯೆಯಿಂದಾಗಿ ಸಾವು ಸಂಭವಿಸಿದೆ ಎಂದು ವರದಿ ಹೇಳಿದೆ. ಆದರೆ, ಆತ್ಮಹತ್ಯೆ ಹಿಂದಿನ ಕಾರಣಗಳು ಮಾತ್ರ ಇನ್ನೂ ಪತ್ತೆಯಾಗಿಲ್ಲ.