‘ಸ್ಥಳೀಯರು ಹೇಳುವಂತೆ ಚಿರತೆ ಕತ್ತಲಾದ ಮೇಲೆ ಹೆಚ್ಚಾಗಿ ಕಾಣಿಸಿಕೊಂಡಿದೆ. ಹೀಗಾಗಿ, ಸಂಜೆಯಾದ ಮೇಲೆ ಮನೆಯಿಂದ ಹೊರ ಹೋಗದಂತೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಲಾಗಿದೆ. ಸ್ಥಳೀಯರ ಮನೆಯಲ್ಲಿರುವ ಸಿಸಿಟಿವಿ ಕ್ಯಾಮೆರಾ ಫೂಟೇಜ್ಗಳನ್ನು ಪರಿಶೀಲಿಸಲಾಗಿದ್ದು, ಸೋಮವಾರ ಚಿರತೆ ಕಾಣಿಸಿಕೊಂಡಿಲ್ಲ. ಕೆಲ ದಿನಗಳ ಹಿಂದೆ ಪಚ್ಚನಾಡಿ ಭಾಗದಲ್ಲಿ ಚಿರತೆ ಕಂಡಿರುವ ಬಗ್ಗೆ ಸಾರ್ವಜನಿಕರು ತಿಳಿಸಿದ್ದರು’ ಎಂದು ಡಿಸಿಎಫ್ ಡಾ. ದಿನೇಶ್ ಕುಮಾರ್ ತಿಳಿಸಿದರು.