<p><strong>ಪುತ್ತೂರು</strong>: ‘ವೈಜ್ಞಾನಿಕ ಪರೀಕ್ಷೆ ನಡೆಸದೆ, ಕೆಲವು ಶೈಕ್ಷಣಿಕ ಸಂಸ್ಥೆಗಳ ಸಂಶೋಧನೆಯ ಆಧಾರದಲ್ಲಿ ಅಡಿಕೆಯ ಬಗ್ಗೆ ಆತುರದ ನಿರ್ಧಾರಕ್ಕೆ ಬರಬಾರದು. ವೈಜ್ಞಾನಿಕ ಸಂಶೋಧನೆ ನಡೆಸಿ, ಫಲಿತಾಂಶ ವನ್ನು ಸಾರ್ವಜನಿಕರ ಮುಂದಿಡುವಂತೆ ಪ್ರತಿ ರಾಜ್ಯದ ಸರ್ಕಾರವನ್ನು ಒತ್ತಾಯಿಸಬೇಕು’ ಎಂದು ಕ್ಯಾಂಪ್ಕೊ ನಿರ್ದೇಶಕ ಮುರಳಿಕೃಷ್ಣ ನುಡಿದರು.</p>.<p>ಶುಕ್ರವಾರ ಇಲ್ಲಿ ನಡೆದ ‘ಅರೆಕಾನಟ್ ಚಾಲೆಂಜ್: ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್ ಈಸ್ಟ್ ಏಷ್ಯಾ ರೀಜನ್’ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p>‘ತಂಬಾಕು ಮುಂತಾದ ಕ್ಯಾನ್ಸರ್ ಕಾರಕ ಉತ್ಪನ್ನಗಳ ಪಟ್ಟಿಗೆ ಅಡಿಕೆಯನ್ನು ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಉತ್ಸುಕವಾಗಿದೆ. ಅಡಿಕೆಯನ್ನು ಒಂದು ಚಟವಾಗಿ ಬಳಸಲಾಗುತ್ತಿದ್ದು ಅದನ್ನು ಸುಲಭವಾಗಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ವಿಜ್ಞಾನಿಗಳು ಈಗ ಹೇಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತಿಳಿವಳಿಕೆ ನೀಡಬೇಕು. ಅಡಿಕೆಯನ್ನು ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆ ಮಾಡಲಾಗುತ್ತಿದೆ. ಅಡಿಕೆ ಬಗ್ಗೆ ಯಾವುದೇ ಅಭಿಪ್ರಾಯಕ್ಕೆ ಬರುವ ಮುನ್ನ ಇದನ್ನು ಗಮನಿಸಬೇಕು’ ಎಂಬ ಒತ್ತಾಯ ವೆಬಿನಾರ್ನಲ್ಲಿ ವ್ಯಕ್ತವಾಯಿತು.</p>.<p>ವಿಘ್ನೇಶ್ವರ ವರ್ಮುಡಿ ಮಾತನಾಡಿ, ‘ಅಡಿಕೆ ಬೆಳೆಯುವ, ಬಳಕೆ ಮಾಡುವ ಹಾಗೂ ಅವಲಂಬಿತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ಗಮನದಲ್ಲಿ ಇರಿಸಿಕೊಂಡು ಅಂತಿಮ ನಿರ್ಧಾರಕ್ಕೆ ಬರುವುದು ಸೂಕ್ತ’ ಎಂದರು. </p>.<p>ಭಾರತವೂ ಸೇರಿದಂತೆ ವಿವಿಧ ರಾಷ್ಟ್ರಗಳ ಸುಮಾರು 160ಕ್ಕೂ ಹೆಚ್ಚು ಮಂದಿ ವೆಬಿನಾರ್ನಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ‘ವೈಜ್ಞಾನಿಕ ಪರೀಕ್ಷೆ ನಡೆಸದೆ, ಕೆಲವು ಶೈಕ್ಷಣಿಕ ಸಂಸ್ಥೆಗಳ ಸಂಶೋಧನೆಯ ಆಧಾರದಲ್ಲಿ ಅಡಿಕೆಯ ಬಗ್ಗೆ ಆತುರದ ನಿರ್ಧಾರಕ್ಕೆ ಬರಬಾರದು. ವೈಜ್ಞಾನಿಕ ಸಂಶೋಧನೆ ನಡೆಸಿ, ಫಲಿತಾಂಶ ವನ್ನು ಸಾರ್ವಜನಿಕರ ಮುಂದಿಡುವಂತೆ ಪ್ರತಿ ರಾಜ್ಯದ ಸರ್ಕಾರವನ್ನು ಒತ್ತಾಯಿಸಬೇಕು’ ಎಂದು ಕ್ಯಾಂಪ್ಕೊ ನಿರ್ದೇಶಕ ಮುರಳಿಕೃಷ್ಣ ನುಡಿದರು.</p>.<p>ಶುಕ್ರವಾರ ಇಲ್ಲಿ ನಡೆದ ‘ಅರೆಕಾನಟ್ ಚಾಲೆಂಜ್: ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್ ಈಸ್ಟ್ ಏಷ್ಯಾ ರೀಜನ್’ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p>‘ತಂಬಾಕು ಮುಂತಾದ ಕ್ಯಾನ್ಸರ್ ಕಾರಕ ಉತ್ಪನ್ನಗಳ ಪಟ್ಟಿಗೆ ಅಡಿಕೆಯನ್ನು ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಉತ್ಸುಕವಾಗಿದೆ. ಅಡಿಕೆಯನ್ನು ಒಂದು ಚಟವಾಗಿ ಬಳಸಲಾಗುತ್ತಿದ್ದು ಅದನ್ನು ಸುಲಭವಾಗಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ವಿಜ್ಞಾನಿಗಳು ಈಗ ಹೇಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತಿಳಿವಳಿಕೆ ನೀಡಬೇಕು. ಅಡಿಕೆಯನ್ನು ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಕೆ ಮಾಡಲಾಗುತ್ತಿದೆ. ಅಡಿಕೆ ಬಗ್ಗೆ ಯಾವುದೇ ಅಭಿಪ್ರಾಯಕ್ಕೆ ಬರುವ ಮುನ್ನ ಇದನ್ನು ಗಮನಿಸಬೇಕು’ ಎಂಬ ಒತ್ತಾಯ ವೆಬಿನಾರ್ನಲ್ಲಿ ವ್ಯಕ್ತವಾಯಿತು.</p>.<p>ವಿಘ್ನೇಶ್ವರ ವರ್ಮುಡಿ ಮಾತನಾಡಿ, ‘ಅಡಿಕೆ ಬೆಳೆಯುವ, ಬಳಕೆ ಮಾಡುವ ಹಾಗೂ ಅವಲಂಬಿತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ಗಮನದಲ್ಲಿ ಇರಿಸಿಕೊಂಡು ಅಂತಿಮ ನಿರ್ಧಾರಕ್ಕೆ ಬರುವುದು ಸೂಕ್ತ’ ಎಂದರು. </p>.<p>ಭಾರತವೂ ಸೇರಿದಂತೆ ವಿವಿಧ ರಾಷ್ಟ್ರಗಳ ಸುಮಾರು 160ಕ್ಕೂ ಹೆಚ್ಚು ಮಂದಿ ವೆಬಿನಾರ್ನಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>