<p><strong>ಮಂಗಳೂರು</strong>: ಭಾರತ ಮ್ಯಾನ್ಮಾರ್ ಗಡಿಯಲ್ಲಿ ಮಣಿಪುರದ ಮೂಲಕ ಭಾರತಕ್ಕೆ ಅಕ್ರಮವಾಗಿ ಬರುವ ಅಡಿಕೆ ಮತ್ತು ಕಾಳುಮೆಣಸು ನಿಯಂತ್ರಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ಕುಮಾರ್ ಕೊಡ್ಗಿ ಅವರು ಕೇಂದ್ರ ವಿದೇಶಾಂಗ ವ್ಯವಹಾರ ಸಚಿವ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.</p>.<p>ಬರ್ಮಾದಿಂದ ಕಳಪೆ ಗುಣಮಟ್ಟದ ಅಡಿಕೆಯು ಶೇ 108ರಷ್ಟು ಆಮದು ಶುಲ್ಕದೊಂದಿಗೆ ಕೆ.ಜಿ.ಯೊಂದಕ್ಕೆ ₹ 251ರಂತೆ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತದೆ. ಇದು ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರೈಲ್ವೆ, ರಸ್ತೆ ಮಾರ್ಗದಲ್ಲಿ ಸಾಗಣೆಯಾಗುತ್ತದೆ. ಇದು ಭಾರತದ ಮಾರುಕಟ್ಟೆಯಲ್ಲಿ ಕೆ.ಜಿ.ಯೊಂದಕ್ಕೆ ₹ 250ರಿಂದ ₹ 260ರ ದರದಲ್ಲಿ ಮಾರಾಟವಾಗುತ್ತದೆ. ಇದು ದೇಸೀಯ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಈ ನಡುವೆ, 2020ರಿಂದ ಬಂದಾಗಿದ್ದ ಮ್ಯಾನ್ಮಾರ್ ಗಡಿಯಲ್ಲಿ 1 ಮತ್ತು 2ನೇ ಗೇಟ್ ತೆರೆಯಲು ಅನುಮತಿ ನೀಡಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇತ್ತೀಚೆಗೆ ಆದೇಶ ಹೊರಡಿಸಿದೆ. ವ್ಯಾಪಾರ ವಹಿವಾಟಿನ ದೃಷ್ಟಿಯಿಂದ ಗಡಿಯ ಗೇಟ್ ತೆರೆದಿರುವ ಕ್ರಮ ಸ್ವಾಗತಾರ್ಹವಾಗಿದೆ. ಆದರೆ, ಈ ಗಡಿಯಲ್ಲಿನ ವಹಿವಾಟಿನಲ್ಲಿ ಅಡಿಕೆ ಮತ್ತು ಕಾಳುಮೆಣಸು ಉತ್ಪನ್ನಗಳನ್ನು ಹೊರತುಪಡಿಸಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಭಾರತ ಮ್ಯಾನ್ಮಾರ್ ಗಡಿಯಲ್ಲಿ ಮಣಿಪುರದ ಮೂಲಕ ಭಾರತಕ್ಕೆ ಅಕ್ರಮವಾಗಿ ಬರುವ ಅಡಿಕೆ ಮತ್ತು ಕಾಳುಮೆಣಸು ನಿಯಂತ್ರಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ಕುಮಾರ್ ಕೊಡ್ಗಿ ಅವರು ಕೇಂದ್ರ ವಿದೇಶಾಂಗ ವ್ಯವಹಾರ ಸಚಿವ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.</p>.<p>ಬರ್ಮಾದಿಂದ ಕಳಪೆ ಗುಣಮಟ್ಟದ ಅಡಿಕೆಯು ಶೇ 108ರಷ್ಟು ಆಮದು ಶುಲ್ಕದೊಂದಿಗೆ ಕೆ.ಜಿ.ಯೊಂದಕ್ಕೆ ₹ 251ರಂತೆ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತದೆ. ಇದು ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರೈಲ್ವೆ, ರಸ್ತೆ ಮಾರ್ಗದಲ್ಲಿ ಸಾಗಣೆಯಾಗುತ್ತದೆ. ಇದು ಭಾರತದ ಮಾರುಕಟ್ಟೆಯಲ್ಲಿ ಕೆ.ಜಿ.ಯೊಂದಕ್ಕೆ ₹ 250ರಿಂದ ₹ 260ರ ದರದಲ್ಲಿ ಮಾರಾಟವಾಗುತ್ತದೆ. ಇದು ದೇಸೀಯ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಈ ನಡುವೆ, 2020ರಿಂದ ಬಂದಾಗಿದ್ದ ಮ್ಯಾನ್ಮಾರ್ ಗಡಿಯಲ್ಲಿ 1 ಮತ್ತು 2ನೇ ಗೇಟ್ ತೆರೆಯಲು ಅನುಮತಿ ನೀಡಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇತ್ತೀಚೆಗೆ ಆದೇಶ ಹೊರಡಿಸಿದೆ. ವ್ಯಾಪಾರ ವಹಿವಾಟಿನ ದೃಷ್ಟಿಯಿಂದ ಗಡಿಯ ಗೇಟ್ ತೆರೆದಿರುವ ಕ್ರಮ ಸ್ವಾಗತಾರ್ಹವಾಗಿದೆ. ಆದರೆ, ಈ ಗಡಿಯಲ್ಲಿನ ವಹಿವಾಟಿನಲ್ಲಿ ಅಡಿಕೆ ಮತ್ತು ಕಾಳುಮೆಣಸು ಉತ್ಪನ್ನಗಳನ್ನು ಹೊರತುಪಡಿಸಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>