ಬ್ಯಾಂಕ್ನ ಸಿಬ್ಬಂದಿಯನ್ನು ಆದ್ಯತಾ ಕ್ಷೇತ್ರ ಎಂದು ಪರಿಗಣಿಸಿ ಲಸಿಕೆ ಹಾಕಿರುವುದಕ್ಕೆ ಬ್ಯಾಂಕ್ನ ಮಹಾಪ್ರಬಂಧಕ ಯೋಗೀಶ್ ಆಚಾರ್ಯ ಜಿಲ್ಲಾಡಳಿತ ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರನ್ನು ಅಭಿನಂದಿಸಿದರು. ಯಾವುದೇ ಸಂದಿಗ್ಧ ಸ್ಥಿತಿ ಇದ್ದರೂ ಬ್ಯಾಂಕ್ ತನ್ನ ಸೇವೆಯನ್ನು ಮಾಡಲಿದೆ ಎಂದರು. ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಳ ಭಾಗವಾಗಿ ಮಾಸ್ಕ್, ಡಿಜಿಟಲ್ ಥರ್ಮೋ ಮೀಟರ್, ಆಕ್ಸಿಮೀಟರ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಬ್ಯಾಂಕ್ನ ಉಪಮಹಾಪ್ರಬಂಧಕ ರಾಘವ ನಾಯ್ಕ್, ಸುಚಿತ್ರಾ ಎಸ್., ಲೀಡ್ ಬ್ಯಾಂಕ್ ಪ್ರಬಂಧಕ ಪ್ರವೀಣ್ ಎಂ.ಪಿ. ಉಪಸ್ಥಿತರಿದ್ದರು.