ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ನದಿಗೆ ಉರುಳಿದ ಕಾರು

Last Updated 6 ಜನವರಿ 2021, 5:26 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾವಂಜೆ ಸೇತುವೆ ಬಳಿಯ ಸಂಚರಿಸುತಿದ್ದ ಕಾರು, ಹಠಾತ್ತನೆ ನಂದಿನಿ ನದಿಗೆ ಬಿದ್ದಿದ್ದು, ಕಾರಿನಲ್ಲಿದ್ದವರು ಈಜಿ ದಡ ಸೇರಿದ್ದಾರೆ.

ಸುರತ್ಕಲ್‌ ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಅವರ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್‌ಕ್ಕೆ ತೆರಳಿ, ಅಲ್ಲಿಂದ ವಾಪಸ್ ಬರುವ ವೇಳೆ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ನಂದಿನಿ ನದಿಗೆ ಬಿದ್ದಿದೆ. ಕಾರು ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರಿನಿಂದ ಹೊರಬಂದು ಈಜಿ ದಡ ಸೇರಿದ್ದಾರೆ. ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುರತ್ಕಲ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು, ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT